12:34 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷೆಯಾಗಿ ಸಾನ್ವಿ ಸುವರ್ಣ

29/10/2023, 09:06

ಬಂಟ್ವಾಳ(reporterkarnataka.com):ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಡೇಶಿವಾಲಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 6 ರಂದು ನಡೆಸಲಾಗುವುದು. ಸಮ್ಮೇಳನದಲ್ಲಿ ತಾಲೂಕಿನ 18 ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ‘ಮಕ್ಕಳ ಕಲಾ ಲೋಕ’ ದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿರುವರು.
ಸಾನ್ವಿ ಅವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿ ಪುತ್ರಿ. ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುವರು. ಶಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು. ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೊಗ್ರಾಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ಹೇಳಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು