4:33 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು