12:11 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು