12:13 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು