10:55 AM Wednesday22 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು