10:35 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು