3:15 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು