7:08 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ

01/10/2024, 15:00

ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು

ಇತ್ತೀಚಿನ ಸುದ್ದಿ

ಜಾಹೀರಾತು