10:15 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ 

11/10/2021, 11:04

ಬಂಟ್ವಾಳ(reporterkarnataka.com):

ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. 

ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದೀಶ ಗೌಡ ಕಲ್ಕಳ ಅವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು.

ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತುಲು ಲಿಪಿಯಲ್ಲಿ ನಾಮಫಲಕವನ್ನು ಬರೆದ ಜಯ ಆರ್ಟ್ಸ್‌ನ ಜಯರಾಮ, ಯುವಜನ ವ್ಯಾಯಾಮ ಶಾಲೆ ಭಂಡಾರಿಬೆಟ್ಟು ಇದರ ಅಧ್ಯಕ್ಷರಾದ ಹೆನ್ರಿ ಪಿರೇರಾ ಉಪಸ್ಥಿತಿ ಇದ್ದರು. ತುಲುನಾಡ ಯುವಸೇನೆ ಬಂಟ್ವಾಳ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ತುಲು ಲಿಪಿ ಶಿಕ್ಷಕರಾದ ಪೃಥ್ವಿ ತುಲುವೆ ಕಾರ್ಯಕ್ರಮವನ್ನು ನಿರೂಪಿಸಿದರು. ನಾಮಫಲಕ ಅನಾವರಣದ ನಂತರ ಜೈ ತುಲುನಾಡ್ (ರಿ.), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ನಡೆದ ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರದ ತುಲು ಲಿಪಿ ಪರೀಕ್ಷೆ ನಡೆಯಿತು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಪರೀಕ್ಷೆಯನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು