8:39 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ

21/05/2025, 21:27

ಮಂಗಳೂರು(reporterkarnataka.com): ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.
ಐವತ್ತು ದಶಕಗಳ ಹಿಂದೆಯೇ ಸುಮಾರು 37 ಧರ್ನಶಿಶು (ಮಕ್ಕಳ ಪೋಷಕ) ಹೊಂದಿ ಹಿತ ಪೋಷಕರೆಣಿಸಿ ಶ್ರೇಷ್ಠವ್ಯಕ್ತಿವೆಂದೇ ಗುರುತಿಸಿ ಜನಾನುರೆಸಿದ್ದರು. ಬಳಿಕ ಬಂಟ್ವಾಳ ಮೊಡಂಕಾಪು ಇಲ್ಲಿನ ಇನ್ಫೆoಟ್ ಜೀಸಸ್ ಚರ್ಚ್ ನಲ್ಲಿ ಪಾಲನಾ ಸಮಿತಿ ಸದಸ್ಯರಾಗಿ,
ತಿಸ್ರಿ ಒಡ್ದ್ ಇದರ ಅಧ್ಯಕ್ಷರಾಗಿ, ಕಥೋಲಿಕ್ ಸಭಾ ಇದರ ಸಕ್ರಿಯ ಸದಸ್ಯರಾಗಿ, ಕೊಡುಗೈದಾನಿಯಾಗಿ ಅನುಪಮ ಸೇವೆ ಸಲ್ಲಿಸಿದ್ದು, ಸದ್ಯ ಮಂಗಳೂರು ಬಿಕರ್ಣಕಟ್ಟೆ ಇಲ್ಲಿನ ಜಯಶ್ರೀಗೇಟ್ ನ ಸ್ವನಿವಾಸದಲ್ಲಿ ನೆಲೆಸಿದ್ದರು.
ಮೃತರು ಪತ್ನಿ ಇಬ್ಬರು ಸುಪುತ್ರಿಯರು, ಮುಂಬಯಿ ಪತ್ರಕರ್ತ ರೋನ್ಸ್ ಬಂಟ್ವಾಳ ಸೇರಿದಂತೆ ಮೂವರು ಪುತ್ರರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು
ನಾಳೆ ಗುರುವಾರ (ಮೇ 22) ಮಧ್ಯಾಹ್ನ 2:00 ಗಂಟೆಗೆ ಸ್ವನಿವಾಸಕ್ಕೆ ತಂದು ಬಳಿಕ 2:45 ರಿಂದ 3:30ರ ವರೆಗೆ ಬಜ್ಜೋಡಿ ಅಲ್ಲಿನ ಇನ್ಫೆಂಟ್ ಮೇರಿ ಚರ್ಚ್‌ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗುವುದು. 3:30 ಗಂಟೆಗೆ ಪೂಜೆ, ನಂತರ ಸೈoಟ್ ಸೆಬಾಸ್ಟಿಯನ್ ಚರ್ಚ್ (ಬೆಂದೂರು) ಇದರ ಸಮಾಧಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು