12:11 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ

21/05/2025, 21:27

ಮಂಗಳೂರು(reporterkarnataka.com): ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.
ಐವತ್ತು ದಶಕಗಳ ಹಿಂದೆಯೇ ಸುಮಾರು 37 ಧರ್ನಶಿಶು (ಮಕ್ಕಳ ಪೋಷಕ) ಹೊಂದಿ ಹಿತ ಪೋಷಕರೆಣಿಸಿ ಶ್ರೇಷ್ಠವ್ಯಕ್ತಿವೆಂದೇ ಗುರುತಿಸಿ ಜನಾನುರೆಸಿದ್ದರು. ಬಳಿಕ ಬಂಟ್ವಾಳ ಮೊಡಂಕಾಪು ಇಲ್ಲಿನ ಇನ್ಫೆoಟ್ ಜೀಸಸ್ ಚರ್ಚ್ ನಲ್ಲಿ ಪಾಲನಾ ಸಮಿತಿ ಸದಸ್ಯರಾಗಿ,
ತಿಸ್ರಿ ಒಡ್ದ್ ಇದರ ಅಧ್ಯಕ್ಷರಾಗಿ, ಕಥೋಲಿಕ್ ಸಭಾ ಇದರ ಸಕ್ರಿಯ ಸದಸ್ಯರಾಗಿ, ಕೊಡುಗೈದಾನಿಯಾಗಿ ಅನುಪಮ ಸೇವೆ ಸಲ್ಲಿಸಿದ್ದು, ಸದ್ಯ ಮಂಗಳೂರು ಬಿಕರ್ಣಕಟ್ಟೆ ಇಲ್ಲಿನ ಜಯಶ್ರೀಗೇಟ್ ನ ಸ್ವನಿವಾಸದಲ್ಲಿ ನೆಲೆಸಿದ್ದರು.
ಮೃತರು ಪತ್ನಿ ಇಬ್ಬರು ಸುಪುತ್ರಿಯರು, ಮುಂಬಯಿ ಪತ್ರಕರ್ತ ರೋನ್ಸ್ ಬಂಟ್ವಾಳ ಸೇರಿದಂತೆ ಮೂವರು ಪುತ್ರರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು
ನಾಳೆ ಗುರುವಾರ (ಮೇ 22) ಮಧ್ಯಾಹ್ನ 2:00 ಗಂಟೆಗೆ ಸ್ವನಿವಾಸಕ್ಕೆ ತಂದು ಬಳಿಕ 2:45 ರಿಂದ 3:30ರ ವರೆಗೆ ಬಜ್ಜೋಡಿ ಅಲ್ಲಿನ ಇನ್ಫೆಂಟ್ ಮೇರಿ ಚರ್ಚ್‌ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗುವುದು. 3:30 ಗಂಟೆಗೆ ಪೂಜೆ, ನಂತರ ಸೈoಟ್ ಸೆಬಾಸ್ಟಿಯನ್ ಚರ್ಚ್ (ಬೆಂದೂರು) ಇದರ ಸಮಾಧಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು