6:20 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ: ಸುಮಾರು 7 ಕೋಟಿ ವೆಚ್ಚದ ಯೋಜನೆ

05/10/2023, 21:47

ಬಂಟ್ವಾಳ(reporterkarnataka.com): ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋಟಿ ರೂ.ವೆಚ್ಚದಲ್ಲಿ ಭರದಿಂದ ನಡೆಯುತ್ತಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ.
ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮಂಟಪದ ಮೇಲ್ಛಾವಣಿಗೆ ತಾಮ್ರದ ಹೊದಿಕೆಯ ಕಾರ್ಯ ಪೂರ್ಣಗೊಂಡಿದ್ದು, 2024ರ ಜ. 17ರಿಂದ 25ರವರೆಗೆ ಕ್ಷೇತ್ರದ ಬ್ರಹ್ಮಕಲಶೋತ್ಸವ ನೆರವೇರಲಿದೆ.
ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಆಗಮ ಶಾಸ್ತ್ರಕ್ಕೆ ಪೂರಕವಾಗಿ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಸುಮಾರು 2.5 ಕೋ.ರೂ.ಗಳ ಕಾಮಗಾರಿಗಳು ಪೂರ್ಣಗೊಂಡಿದೆ. ಸುತ್ತಪೌಳಿಯ ಶಿಲಾಮಯ ಗೋಡೆಗಳು ಬಹುತೇಕ ಪೂರ್ಣಗೊಂಡಿದ್ದು, ಮೇಲ್ಛಾವಣಿಯ ದಾರುಶಿಲ್ಪದ ಕಾರ್ಯ ಪ್ರಗತಿಯಲ್ಲಿದೆ.

ಧ್ವಜಸ್ತಂಭದ ತೈಲಾಧಿವಾಸ ನಡೆದಿದ್ದು, ಪ್ರಸ್ತುತ ಪ್ರತಿನಿತ್ಯವೂ ಭಕ್ತರು ಎಳ್ಳೆಣ್ಣೆ ಸಮರ್ಪಿಸುತ್ತಿದ್ದಾರೆ. ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ತಾಮ್ರದ ಹೊದಿಕೆಗೆ ಪ್ರತಿ ಮನೆಯ ಭಕ್ತರ ಸೇವೆ ಸಂದಾಯವಾಗಬೇಕು ಎನ್ನುವ ನಿಟ್ಟಿನಲ್ಲಿ ಕೂಪನ್‌ಗಳನ್ನು ನೀಡಲಾಗಿದ್ದು, ಜತೆಗೆ ಸ್ವರ್ಣಲೇಪಿತ ಪ್ರಧಾನ ಕಲಶಕ್ಕೂ ಪ್ರತಿ ಭಕ್ತರ ಸೇವೆಯ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಪ್ರತ್ಯೇಕ ಕಾಣಿಕೆ ಡಬ್ಬಿಯನ್ನಿಟ್ಟು ಭಕ್ತರ ಇಚ್ಛಾನುಸಾರ ಕಾಣಿಕೆ ನೀಡಲು ಜೀರ್ಣೊದ್ಧಾರ ಸಮಿತಿ ಅವಕಾಶ ಕಲ್ಪಿಸಿದೆ.
ಮುಂದಿನ ದಿನಗಳಲ್ಲಿ ಹನುಮಂತ ದೇವರ ಗುಡಿ, ನಾಗದೇವರ ಬನ, ಪರಿವಾರ ದೈವಗಳ ಗುಡಿಗಳು, ವಸಂತ ಮಂಟಪ ಮೊದಲಾದ ಕಾಮಗಾರಿಗಳು ಶೀಘ್ರ ಪ್ರಾರಂಭಗೊಳ್ಳಲಿದೆ. ವಾಸ್ತು ಶಿಲ್ಪಿ ಮಹೇಶ್ ಮುನಿಯಂಗಳ ಅವರ ನೇತೃತ್ವದಲ್ಲಿ ವಾಸುಶಿಲ್ಪದ ಕೆಲಸಗಳು ನಡೆಯುತ್ತಿದ್ದು, ಸಂಸದರು, ಶಾಸಕರು, ಮಾಜಿ ಸಚಿವರು, ಹಲ್ಸನಾಡು ಮನೆತನದ ಧನಿಗಳ ಗೌರವಾಧ್ಯಕ್ಷೆಯ ಜೀರ್ಣೋದ್ಧಾರ ಸಮಿತಿಯಲ್ಲಿ ಡಾ.ಎಂ.ಮೋಹನ್ ಆಳ್ವ ಸಂಚಾಲಕರಾಗಿ, ಎಂ.ಎಸ್.ಶೆಟ್ಟಿ ಸರಪಾಡಿ ಅಧ್ಯಕ್ಷರಾಗಿ, ಜಗನ್ನಾಥ ಚೌಟ ಬದಿಗುಡ್ಡೆ ಮಾಣಿ ಕಾರ್ಯಾಧ್ಯಕ್ಷರಾಗಿ ಇತರ ಪದಾಧಿಕಾರಿಗಳು, ಸದಸ್ಯರ ತಂಡ ಜೀರ್ಣೋದ್ಧಾರ ಕಾರ್ಯದ ಯಶಸ್ಸಿನಲ್ಲಿ ಶ್ರಮಿಸುತ್ತಿದೆ.
ಒಂದೆಡೆ ಶಿಲಾಮಯ ದೇವಾಲಯ ನಿರ್ಮಾಣಕ್ಕಾಗಿ ಕಲ್ಲಿನ ಕೆಲಸಗಳು, ದಾರುಶಿಲ್ಪದ ಕೆಲಸಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರತಿನಿತ್ಯವೂ ನೂರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಶ್ರಮದಾನ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಕೆಲಸಗಳಿಗೆ ಭಕ್ತರ ಶ್ರಮದಾನ ಸಹಕಾರ ಲಭಿಸಿದ ಪರಿಣಾಮ ಜೀರ್ಣೋದ್ಧಾರ ಕಾರ್ಯಗಳು ಸರಾಗವಾಗಿ ನಡೆದುಕೊಂಡು ಹೋಗುವುದಕ್ಕೆ ಸಹಕಾರಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು