3:40 AM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬರೇ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ವರ್ಗಾವಣೆ!: ಡ್ರಗ್ಸ್, ಮಟ್ಕಾ ವಿರುದ್ಧ ಸಮರ ಸಾರಿದ್ದ ಅಧಿಕಾರಿ

05/09/2023, 10:12

ಮಂಗಳೂರು(reporterkarnataka.com):ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ ಅವರನ್ನು ನೇಮಿಸಲಾಗಿದೆ.ಸರಕಾರ ಈ ಕುರಿತು ಆದೇಶ ಹೊರಡಿಸಿದೆ.
ಕೇವಲ 5 ತಿಂಗಳ ಹಿಂದೆ ನೇಮಕಗೊಂಡ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷ ಅಧಿಕಾರಿ ಎಂದೇ ಗುರುತಿಸಿ ಕೊಂಡಿದ್ದ ಕುಲ್ ದೀಪ್ ಕುಮಾರ್ ಜೈನ್ ಅವರು
ಡ್ರಗ್ಸ್ ವಿರುದ್ದ ಸಮರ ಸಾರಿದ್ದರು. ಮಂಗಳೂರನ್ನು
ಡ್ರಗ್ಸ್ ಫ್ರೀ ಮಾಡುವ ಗುರಿ ಹೊಂದಿದ್ದರು. ಹಾಗೆ ಮಟ್ಕಾ, ಜೂಜಿಗೆ ಕಡಿವಾಣ ಹಾಕಿದ್ದರು.
ಮಟ್ಕಾ, ಜೂಜು ಅಡ್ಡೆಗಳ ಮೇಲೆ‌ ನಿರಂತರ ದಾಳಿ ನಡೆಸಿದ್ದ ರು. ಡ್ರಗ್ಸ್, ಮಟ್ಕಾ ಮಾಫಿಯಾದ ಹಿಂದೆ ಬಿದ್ದಿದ್ದೇ ಕುಲ್ ದೀಪ್ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು