11:18 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

13/12/2024, 19:52

ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.
ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು