4:01 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

13/12/2024, 19:52

ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.
ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು