8:38 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್

13/12/2024, 19:52

ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾದ ಅನುದಾನದ ಬಗ್ಗೆ ಪ್ರಶ್ನಿಸಿ, ಕೇವಲ ಕೇಂದ್ರ ಸರ್ಕಾರದ ಅನುದಾನದಿಂದಲೇ ಮಹಾನಗರ ಪಾಲಿಕೆಯ 60 ವಾರ್ಡುಗಳನ್ನೂ ಅಭಿವೃದ್ಧಿಗೊಳಿಸಲು ಅಸಾಧ್ಯ, ರಾಜ್ಯ ಸರ್ಕಾರವೂ ವಿಶೇಷ ಅನುದಾನಗಳನ್ನು ನೀಡುವ ಬಗ್ಗೆ ಕ್ರಮವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.
ಕಳೆದ ಅವಧಿಯಲ್ಲಿ ಕೆಯುಡಿಎಫ್ ಸಿ ವತಿಯಿಂದ ಕ್ಷೇತ್ರದಲ್ಲಿ ಆರಂಭಗೊಂಡಿದ್ದ ಕಾಮಗಾರಿಗಳಿಂದಾಗಿ ಹಲವೆಡೆ ರಸ್ತೆಗಳು ಹದಗೆಟ್ಟಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಮುಗಿದ ನಂತರ ಮರು ರಸ್ತೆ ನಿರ್ಮಾಣಕ್ಕೆಂದೇ ಈ ಹಿಂದೆ ಮೀಸಲಿರಿಸಲಾಗಿದ್ದ ಸುಮಾರು 72 ಕೋಟಿ ಅನುದಾನವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಿದ್ದೇ ಇಂದು ಇಲ್ಲಿನ ಹೊಂಡಗಳನ್ನೂ ಸಹ ಮುಚ್ಚಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಮೂಲ ಕಾರಣ, ಹಾಗಾಗಿ ಇದನ್ನು ಸಚಿವರು ಆದ್ಯತೆಯ ಮೇರೆಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಒಂದೂವರೆ ವರ್ಷ ಕಳೆದರೂ ಅಮೃತ್ ಯೋಜನೆಗಳು ಇನ್ನೂ ಸಹ ಟೆಂಡರ್ ಹಂತದಲ್ಲಿಯೇ ಇರುವ ಬಗ್ಗೆ, ಬಹು ಬೇಡಿಕೆಯ ಜಲಸಿರಿ ಯೋಜನೆ ಸ್ಥಗಿತಗೊಂಡಿರುವ ಬಗ್ಗೆ, ಪ್ರಕೃತಿ ವಿಕೋಪದಿಂದಾಗಿ ನಗರದ ಅಲ್ಲಲ್ಲಿ ರಸ್ತೆ ಸಹಿತ ಅನೇಕ ರೀತಿಯ ಹಾನಿಯ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರಕದ ಬಗ್ಗೆ ಹಾಗೂ ಈ ಹಿಂದಿನ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 125 ಕೋಟಿಯ ಯೋಜನೆಯನ್ನು ಪ್ರಸ್ತುತ ರಾಜ್ಯ ಸರ್ಕಾರವು ಸ್ಥಗಿತಗೊಳಿಸಿದ್ದು ಅದನ್ನು ಪುನರ್ ಆರಂಭಿಸುವ ಬಗ್ಗೆ ಶಾಸಕರು ಸರ್ಕಾರದ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು