12:16 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ ಪ್ರಿಯಕರ ಕೊಲೆ

22/06/2021, 22:28

ವಿಜಯಪುರ(reporterkarnataka news): ಬಸವಣ್ಣನ ನಾಡಿನಲ್ಲಿ ಘನಘೋರ ಕೃತ್ಯ ನಡೆದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಪ್ರೇಮಿಗಳನ್ನು ಹತ್ಯೆ ಮಾಡಲಾಗಿದೆ. ಮರ್ಯಾದೆಯ ಹೆಸರಿನಲ್ಲಿ ಮರ್ಯಾದೆಗೇಡು ಕೃತ್ಯವನ್ನು ಮಂಗಳವಾರ ಎಸಗಲಾಗಿದೆ.

ವಿಜಯಪುರ ಜಿಲ್ಲೆಯ ದೇವರ ಹುಪ್ಪರಗಿಯ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ತಂದೆಯೇ ಈ ಕೃತ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಸಲಾದಹಳ್ಳಿ ಗ್ರಾಮದ ಬಸವರಾಜ ಬಡಿಗೇರಿ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಜಾತಿಯೂ ಬೇರೆಯಾಗಿತ್ತು. ಬಸವರಾಜ ಬಡಿಗೇರಿಗೆ 18 ವರ್ಷವಾದರೆ, ಬಾಲಕಿಗೆ 16 ವರ್ಷ. ಇವರ ಪ್ರೀತಿಗೆ ಬಾಲಕಿಯ ತಂದೆಯ ವಿರೋಧವಿತ್ತು. ಹುಡುಗನ ಜತೆ ಸಲುಗೆಯಿಂದ ಇರದಂತೆ ಬಾಲಕಿಗೆ ಆಕೆಯ ಅಪ್ಪ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದ. ಮಂಗಳವಾರ ಇಬ್ಬರು ಪ್ರೇಮಿಗಳು ಜತೆಯಾಗಿ ಇರುವುದನ್ನು ಕಂಡು ಕ್ರೋಧಗೊಂಡ ಬಾಲಕಿಯ ತಂದೆ ತನ್ನ ಪುತ್ರಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು