8:55 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ ಪ್ರಿಯಕರ ಕೊಲೆ

22/06/2021, 22:28

ವಿಜಯಪುರ(reporterkarnataka news): ಬಸವಣ್ಣನ ನಾಡಿನಲ್ಲಿ ಘನಘೋರ ಕೃತ್ಯ ನಡೆದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಪ್ರೇಮಿಗಳನ್ನು ಹತ್ಯೆ ಮಾಡಲಾಗಿದೆ. ಮರ್ಯಾದೆಯ ಹೆಸರಿನಲ್ಲಿ ಮರ್ಯಾದೆಗೇಡು ಕೃತ್ಯವನ್ನು ಮಂಗಳವಾರ ಎಸಗಲಾಗಿದೆ.

ವಿಜಯಪುರ ಜಿಲ್ಲೆಯ ದೇವರ ಹುಪ್ಪರಗಿಯ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ತಂದೆಯೇ ಈ ಕೃತ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಸಲಾದಹಳ್ಳಿ ಗ್ರಾಮದ ಬಸವರಾಜ ಬಡಿಗೇರಿ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಜಾತಿಯೂ ಬೇರೆಯಾಗಿತ್ತು. ಬಸವರಾಜ ಬಡಿಗೇರಿಗೆ 18 ವರ್ಷವಾದರೆ, ಬಾಲಕಿಗೆ 16 ವರ್ಷ. ಇವರ ಪ್ರೀತಿಗೆ ಬಾಲಕಿಯ ತಂದೆಯ ವಿರೋಧವಿತ್ತು. ಹುಡುಗನ ಜತೆ ಸಲುಗೆಯಿಂದ ಇರದಂತೆ ಬಾಲಕಿಗೆ ಆಕೆಯ ಅಪ್ಪ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದ. ಮಂಗಳವಾರ ಇಬ್ಬರು ಪ್ರೇಮಿಗಳು ಜತೆಯಾಗಿ ಇರುವುದನ್ನು ಕಂಡು ಕ್ರೋಧಗೊಂಡ ಬಾಲಕಿಯ ತಂದೆ ತನ್ನ ಪುತ್ರಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು