8:28 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ ಪ್ರಿಯಕರ ಕೊಲೆ

22/06/2021, 22:28

ವಿಜಯಪುರ(reporterkarnataka news): ಬಸವಣ್ಣನ ನಾಡಿನಲ್ಲಿ ಘನಘೋರ ಕೃತ್ಯ ನಡೆದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಪ್ರೇಮಿಗಳನ್ನು ಹತ್ಯೆ ಮಾಡಲಾಗಿದೆ. ಮರ್ಯಾದೆಯ ಹೆಸರಿನಲ್ಲಿ ಮರ್ಯಾದೆಗೇಡು ಕೃತ್ಯವನ್ನು ಮಂಗಳವಾರ ಎಸಗಲಾಗಿದೆ.

ವಿಜಯಪುರ ಜಿಲ್ಲೆಯ ದೇವರ ಹುಪ್ಪರಗಿಯ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ತಂದೆಯೇ ಈ ಕೃತ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಸಲಾದಹಳ್ಳಿ ಗ್ರಾಮದ ಬಸವರಾಜ ಬಡಿಗೇರಿ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಜಾತಿಯೂ ಬೇರೆಯಾಗಿತ್ತು. ಬಸವರಾಜ ಬಡಿಗೇರಿಗೆ 18 ವರ್ಷವಾದರೆ, ಬಾಲಕಿಗೆ 16 ವರ್ಷ. ಇವರ ಪ್ರೀತಿಗೆ ಬಾಲಕಿಯ ತಂದೆಯ ವಿರೋಧವಿತ್ತು. ಹುಡುಗನ ಜತೆ ಸಲುಗೆಯಿಂದ ಇರದಂತೆ ಬಾಲಕಿಗೆ ಆಕೆಯ ಅಪ್ಪ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದ. ಮಂಗಳವಾರ ಇಬ್ಬರು ಪ್ರೇಮಿಗಳು ಜತೆಯಾಗಿ ಇರುವುದನ್ನು ಕಂಡು ಕ್ರೋಧಗೊಂಡ ಬಾಲಕಿಯ ತಂದೆ ತನ್ನ ಪುತ್ರಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು