3:48 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬಸವಣ್ಣ ತಪೋಭೂಮಿ ಕೂಡಲ ಸಂಗಮದಲ್ಲಿ 2023ರ ಶರಣು ಮೇಳ: ಪ್ರಚಾರಕ್ಕೆ ಮಾತೆ ಗಂಗಾದೇವಿ ಆಗಮನ

20/12/2022, 18:40

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ದಯವಿಲ್ಲದ ಧರ್ಮವಾವುದಯ್ಯಾ..?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ..!
ದಯವೇ ಧರ್ಮದ ಮೂಲವಯ್ಯಾ..!

ಜಾತಿ,ಮತ,ಪಂಥ ಭೇದವಿಲ್ಲದೆ ಸರ್ವ ಧರ್ಮ ಸಮಾನತೆ ಸಾರುವ ವಿಶ್ವಗುರು ಬಸವಣ್ಣನವರ ತಪೋಭೂಮಿ ಐಕ್ಯಕ್ಷೇತ್ರ ಕೂಡಲಸಂಗಮದಲ್ಲಿ ಲಿಂಗಾಯತ ಧರ್ಮಿಯರ ವಾರ್ಷಿಕ ಪವಿತ್ರ ಸಮಾವೇಶ ಶರಣುಮೇಳ 2023 ಜನವರಿ 12ರಿಂದ14ರ ವರೆಗೆ ಜರುಗಲಿದೆ.


ಈ ಕಾರ್ಯಕ್ರಮದ ಪ್ರಯುಕ್ತ ಶರಣು ಮೇಳ ಸಮಿತಿಯ ಕಾರ್ಯದ್ಯಕ್ಷಿ ಪರಮಪೂಜ್ಯ ಶ್ರೀಮನ್ನಿರಂಜನ್ ಮಹಾಜಗದ್ಗುರು ಡಾ. ಮಾತೇ ಗಂಗಾದೇವಿಯವರು, ಮಾತೆ ಬಸವರತ್ನ ಮಾತಾಜಿ (ಸುಕ್ಷೇತ್ರ ಕೂಡಲಸಂಗಮ ಶರಣುಮೇಳ ಸಮಿತಿ ತಂಡ) ಪ್ರತಿ ಹಳ್ಳಿ ಹಳ್ಳಿಗೆ ತೆರಳಿ ಧರ್ಮ ಪ್ರಚಾರ ಹಾಗೂ ಬಸವೇಶ್ವರ ವೃತ್ತದ ಬಳಿ ಷಠಸ್ಥಲ ಧ್ವಜಾರೋಹಣ ನೆರವೇರಿಸಿ ಜಾಹೀರಾತು ನೀಡಿ ಶರಣುಮೇಳಕ್ಕೆ ಆಹ್ವಾನ ನೀಡುತ್ತಿದ್ದಾರೆ.

ಪ್ರಚಾರದ ಅಂಗವಾಗಿ ಇಂದು ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಪ್ರಚಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಾಂವಶಿ ಗ್ರಾಮದ ತಾಯಂದಿರು ಶರಣು ಬಂದುಗಳು ಬರುವಂತೆ ಆಮಂತ್ರಣ ನೀಡಿದರು.
ಡಾ. ಮಾತೆ ಗಂಗಾದೇವಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಂವಶಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಕರು ಊರಿನ ಶರಣು ಬಂದುಗಳು ತಾಯಂದಿರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು