3:16 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ

12/10/2023, 13:32

ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಜಿಲ್ಲೆಯ ಕಾಗವಾಡ ಕ್ಷೇತ್ರದ ಮದಬಾವಿ ಗ್ರಾಮದಲ್ಲಿ ಮತದಾರರ ಅಭಿನಂದನೆ ಹಾಗೂ ರೈತ ಸಮಾವೇಶದಲ್ಲಿ ಕಾಗವಾಡ ಶಾಸಕರಾಜು ಕಾಗೆ ಮತ್ತು ಅಥಣಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಸವೇಶ್ವರ ಏತ ನೀರಾವರಿ ಯೋಜನೆಯ ಇನ್ನುಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾಗವಾಡ ಮತಕ್ಷೇತ್ರದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು. ರೈತರು ಜನಸಾಮಾನ್ಯರು ಕಾರ್ಯಕರ್ತರು ತಮ್ಮ ಸಮಸ್ಯೆಗಳಿದ್ದರೆ ನೇರವಾಗಿ ಸಂಪರ್ಕಿಸಿ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಸದಾ ನಿಮ್ಮ ಜೊತೆ ಇದ್ದು ಸ್ಪಂದಿಸುತ್ತೇನೆ ಎಂದು ಅವರು ಹೇಳಿದರು.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶೈಲಾಜ ಪಾಟೀಲ, ಕೆಪಿಸಿಸಿ ಸದಸ್ಯರಾದ ದಿಗ್ವಿಜಯ ಪವಾರ ದೇಸಾಯಿ, ಚಂದ್ರಕಾಂತ ಇಮ್ಮಡಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಹಾನಂದ ನಿವರ್ಗಿ, ವಿನಾಯಕ ಬಾಗಡಿ, ರವಿ ಪೂಜಾರಿ, ಪ್ರವೀಣ ನಾಯಿಕ,ಸಿದರಾಯ ತೋಡಕರ ಅಸ್ಲಾಂ ಮುಲ್ಲಾ, ನಿಜಗುಣಿ ಮಗದುಮ್ಮ,ಬಸಗೌಡಾ ಪಾಟೀಲ, ಕಾಮಗೌಡಾ ಪಾಟೀಲ,ನಾಯ್ಕುಬಾ ಶಿಂದೆ ಅಶೋಕ ಪೂಜಾರಿ,ಅಣ್ಣಾಸಾಬ ಪಾಟೀಲ,ಅಪ್ಪು ಚೌಗಲಾ, ವಿಠ್ಠಲ ಅವಳೆ, ಅಣ್ಣಪ್ಪ ನಿಂಬಾಳಕರ, ಸಂಜಯ ಅಡಾಟೆ, ಪರಗೊಂಡ ಮುಧೋಳ ಶಿವಾನಂದ ಮಗದುಮ್ಮ, ಸಂಜಯ ತಳವಾರಕರ, ಮಪ್ಪು ಪೂಜಾರಿ ಮೋಹನ ಬಾಗಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು