10:00 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ

12/10/2023, 13:32

ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಜಿಲ್ಲೆಯ ಕಾಗವಾಡ ಕ್ಷೇತ್ರದ ಮದಬಾವಿ ಗ್ರಾಮದಲ್ಲಿ ಮತದಾರರ ಅಭಿನಂದನೆ ಹಾಗೂ ರೈತ ಸಮಾವೇಶದಲ್ಲಿ ಕಾಗವಾಡ ಶಾಸಕರಾಜು ಕಾಗೆ ಮತ್ತು ಅಥಣಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಸವೇಶ್ವರ ಏತ ನೀರಾವರಿ ಯೋಜನೆಯ ಇನ್ನುಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾಗವಾಡ ಮತಕ್ಷೇತ್ರದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು. ರೈತರು ಜನಸಾಮಾನ್ಯರು ಕಾರ್ಯಕರ್ತರು ತಮ್ಮ ಸಮಸ್ಯೆಗಳಿದ್ದರೆ ನೇರವಾಗಿ ಸಂಪರ್ಕಿಸಿ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಸದಾ ನಿಮ್ಮ ಜೊತೆ ಇದ್ದು ಸ್ಪಂದಿಸುತ್ತೇನೆ ಎಂದು ಅವರು ಹೇಳಿದರು.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶೈಲಾಜ ಪಾಟೀಲ, ಕೆಪಿಸಿಸಿ ಸದಸ್ಯರಾದ ದಿಗ್ವಿಜಯ ಪವಾರ ದೇಸಾಯಿ, ಚಂದ್ರಕಾಂತ ಇಮ್ಮಡಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಹಾನಂದ ನಿವರ್ಗಿ, ವಿನಾಯಕ ಬಾಗಡಿ, ರವಿ ಪೂಜಾರಿ, ಪ್ರವೀಣ ನಾಯಿಕ,ಸಿದರಾಯ ತೋಡಕರ ಅಸ್ಲಾಂ ಮುಲ್ಲಾ, ನಿಜಗುಣಿ ಮಗದುಮ್ಮ,ಬಸಗೌಡಾ ಪಾಟೀಲ, ಕಾಮಗೌಡಾ ಪಾಟೀಲ,ನಾಯ್ಕುಬಾ ಶಿಂದೆ ಅಶೋಕ ಪೂಜಾರಿ,ಅಣ್ಣಾಸಾಬ ಪಾಟೀಲ,ಅಪ್ಪು ಚೌಗಲಾ, ವಿಠ್ಠಲ ಅವಳೆ, ಅಣ್ಣಪ್ಪ ನಿಂಬಾಳಕರ, ಸಂಜಯ ಅಡಾಟೆ, ಪರಗೊಂಡ ಮುಧೋಳ ಶಿವಾನಂದ ಮಗದುಮ್ಮ, ಸಂಜಯ ತಳವಾರಕರ, ಮಪ್ಪು ಪೂಜಾರಿ ಮೋಹನ ಬಾಗಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು