9:42 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ

12/10/2023, 13:32

ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಜಿಲ್ಲೆಯ ಕಾಗವಾಡ ಕ್ಷೇತ್ರದ ಮದಬಾವಿ ಗ್ರಾಮದಲ್ಲಿ ಮತದಾರರ ಅಭಿನಂದನೆ ಹಾಗೂ ರೈತ ಸಮಾವೇಶದಲ್ಲಿ ಕಾಗವಾಡ ಶಾಸಕರಾಜು ಕಾಗೆ ಮತ್ತು ಅಥಣಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಸವೇಶ್ವರ ಏತ ನೀರಾವರಿ ಯೋಜನೆಯ ಇನ್ನುಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾಗವಾಡ ಮತಕ್ಷೇತ್ರದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು. ರೈತರು ಜನಸಾಮಾನ್ಯರು ಕಾರ್ಯಕರ್ತರು ತಮ್ಮ ಸಮಸ್ಯೆಗಳಿದ್ದರೆ ನೇರವಾಗಿ ಸಂಪರ್ಕಿಸಿ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಸದಾ ನಿಮ್ಮ ಜೊತೆ ಇದ್ದು ಸ್ಪಂದಿಸುತ್ತೇನೆ ಎಂದು ಅವರು ಹೇಳಿದರು.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶೈಲಾಜ ಪಾಟೀಲ, ಕೆಪಿಸಿಸಿ ಸದಸ್ಯರಾದ ದಿಗ್ವಿಜಯ ಪವಾರ ದೇಸಾಯಿ, ಚಂದ್ರಕಾಂತ ಇಮ್ಮಡಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಹಾನಂದ ನಿವರ್ಗಿ, ವಿನಾಯಕ ಬಾಗಡಿ, ರವಿ ಪೂಜಾರಿ, ಪ್ರವೀಣ ನಾಯಿಕ,ಸಿದರಾಯ ತೋಡಕರ ಅಸ್ಲಾಂ ಮುಲ್ಲಾ, ನಿಜಗುಣಿ ಮಗದುಮ್ಮ,ಬಸಗೌಡಾ ಪಾಟೀಲ, ಕಾಮಗೌಡಾ ಪಾಟೀಲ,ನಾಯ್ಕುಬಾ ಶಿಂದೆ ಅಶೋಕ ಪೂಜಾರಿ,ಅಣ್ಣಾಸಾಬ ಪಾಟೀಲ,ಅಪ್ಪು ಚೌಗಲಾ, ವಿಠ್ಠಲ ಅವಳೆ, ಅಣ್ಣಪ್ಪ ನಿಂಬಾಳಕರ, ಸಂಜಯ ಅಡಾಟೆ, ಪರಗೊಂಡ ಮುಧೋಳ ಶಿವಾನಂದ ಮಗದುಮ್ಮ, ಸಂಜಯ ತಳವಾರಕರ, ಮಪ್ಪು ಪೂಜಾರಿ ಮೋಹನ ಬಾಗಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು