10:50 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಭಟ್ಕಳ ಸೇರಿದಂತೆ ರಾಜ್ಯದ 3 ಕಡೆ ಎನ್‌ಐಎ ದಾಳಿ: 3 ಮಂದಿ ಶಂಕಿತ ಉಗ್ರರು ವಶಕ್ಕೆ

31/07/2022, 17:15

ಬೆಂಗಳೂರು(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸೇರಿದಂತೆ ರಾಜ್ಯದ 3 ಕಡೆಗಳಿಗೆ ಎನ್‌ಐಎ ದಾಳಿ ನಡೆಸಿದ್ದು, 3 ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.

ಇಂಟೆಲಿಜೆನ್ಸಿ,ಎನ್‌ಐಎ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ನೇತೃತ್ವದಲ್ಲಿ ರಾಜ್ಯದ ಮೂರು ಕಡೆಗಳಲ್ಲಿ ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತುಮಕೂರು ಹಾಗೂ ಬೆಳಗಾವಿಯಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಲಾಗಿದೆ. ಮೂವರು ಶಂಕಿತ ಉಗ್ರರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದರೆ ಇವರೆಲ್ಲಾ ಯಾವ ಸಂಘಟನೆಗೆ ಸೇರಿದ್ದಾರೆ ಅನ್ನೋದು ಇನ್ನೂ ಖಚಿತವಾಗಿಲ್ಲ. 

ರಾಜ್ಯ ಮಾತ್ರವಲ್ಲದೇ ಎನ್‌ಐಎ ಅಧಿಕಾರಿ ಗಳು ಮಧ್ಯಪ್ರದೇಶದ ಭೋಪಾಲ್‌ ಹಾಗೂ ರಾಯ್‌ಸೇನ್ ಜಿಲ್ಲೆ, ಬಿಹಾರದ ಅರರಿಯಾ ಜಿಲ್ಲೆ, ಗುಜರಾತ್‌ ರಾಜ್ಯದ ಬರೂಚಾ, ಸೂರತ್‌, ನವ್‌ಸರಿ ಹಾಗೂ ಅಹಮದಾಬಾದ್‌ ಜಿಲ್ಲೆ, ಉತ್ತರ ಪ್ರದೇಶದ ದಿಯೋಬಾಂಡ್‌ ಜಿಲ್ಲೆ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರ ಹಾಗೂ ನಾಂದೇಡ್‌ ಜಿಲ್ಲೆಯಲ್ಲಿ ದಾಳಿ ನಡೆಸಲಾಗಿದೆ.

ಭಟ್ಕಳದಲ್ಲಿ ಅರೆಸ್ಟ್‌:  ಐಸಿಸ್‌ ಜತೆ ನಂಟು ಹೊಂದಿರುವ ಶಂಕೆ ಹಿನ್ನೆಲೆ ಎನ್ಐಎ ಅಧಿಕಾರಿಗಳ ತಂಡ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಶಂಕಿತ ಉಗ್ರನನ್ನು ಅಬ್ದುಲ್ ಮಸ್ತಿರ್‌ (30 ) ಎಂದು ಗುರುತಿಸಲಾಗಿದೆ.

ಈತ ಐಎಸ್‍ಐಎಸ್ ಬರಹಗಳನ್ನು ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಕಾರಣಕ್ಕಾಗಿ ಅಬ್ದುಲ್ ಮಸ್ತಿರನನ್ನು ಭಟ್ಕಳ ನಗರದ ಅರ್ಬನ್ ಬ್ಯಾಂಕ್ ಬಳಿ ಇರುವ ಆತನ ಮನೆಯಿಂದ ಎನ್‍ಐಎ ತಂಡ ವಶಕ್ಕೆ ಪಡೆದಿದೆ.

ಪ್ರಾಥಮಿಕ ಮಾಹಿತಿಯಂತೆ ಈತ ಭಟ್ಕಳ ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂಬ ಆರೋಪವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು