9:49 PM Friday18 - September 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ

ಇತ್ತೀಚಿನ ಸುದ್ದಿ

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ; ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

09/12/2024, 21:32

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆಯು ಭಾನುವಾರ ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.
ಬೆಳಿಗ್ಗೆ 6ರಿಂದ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಮಧ್ಯಾಹ್ನ 1 ಗಂಟೆಯಿಂದ ವಿಜಯ ಭಾಸ್ಕರ್ ಮತ್ತು ಗಣೇಶ್ ಮಂಗಳೂರು ಅವರಿಂದ “ಭಕ್ತಿಗಾನ ಸುಧೆ” ಸಂಜೆ 4 ಗಂಟೆಯಿಂದ “ಸ್ಪೂರ್ತಿ ಮಹಿಳಾ ಭಜನಾ ಮಂಡಳಿ” ಪದವಿನಂಗಡಿ ಮತ್ತು ಶ್ರೀ ನಾರಾಯಣಗುರು ಸೇವಾಸಂಘ, ಮೇರಿಹಿಲ್, ಗುರುನಗರ ಅವರಿಂದ ” ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಿತು.
ಸಂಜೆ 7 ಗಂಟೆಗೆ ಅಗೆಲು ಸೇವೆ ನಡೆದು, ಬಳಿಕ ಅನ್ನಸಂತರ್ಪಣೆ ನೆರವೇರಿತು.


ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಕಮಲಾದೇವಿ ಅಸ್ರಣ ಅವರು ಆಶೀರ್ವಚನ ನೀಡಿದರು. ನಿರೂಪಕ ನವನೀತ್ ಶೆಟ್ಟಿ ಕದ್ರಿ, ಉದ್ಯಮಿಗಳಾದ ಲೀಲಾಕ್ಷ ಕರ್ಕೇರಾ, ಎಂ. ಅಶೋಕ್ ಶೇಟ್, ಲಚ್ಚು ಲಾಲ್, ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು