1:49 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಭತ್ತ ಬೇರ್ಪಡಿಸುವ ಯಂತ್ರ ಆವಿಷ್ಕಾರ: ಹಾಕತ್ತೂರು 10ನೇ ತರಗತಿ ವಿದ್ಯಾರ್ಥಿನಿಯ ಮಹಾನ್ ಸಾಧನೆ

25/01/2023, 10:52

ಮಡಿಕೇರಿ(reporterkarnataka.com): ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿರುವ ಬಡವರ ಮನೆಯ ಮಗಳು ಇವಳು. ವಯಸ್ಸು ಕಿರಿದಾದರೂ ಸಾಧನೆ ಮಾತ್ರ ಹಿರಿದು.


ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ ಮೆಘಾ ಎಸ್. ಅವರು ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ 10ನೇ ತರಗತಿಯ ವಿಧ್ಯಾರ್ಥಿನಿ.
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಆನಂತರ
ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊನ್ನೆಮೊನ್ನೆ ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇಯ ಸ್ಥಾನವನ್ನು ಪಡೆದು ಇದೀಗ ಕೇರಳದ ತ್ರಿಶೂರ್ ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ತಮ್ಮ ಗ್ರಾಮದ ವಿದ್ಯಾರ್ಥಿನಿ ಮೆಘಾಳ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು ಯುವಕ ಸಂಘದ ಪದಾಧಿಕಾರಿಗಳು ಈ ದಿನ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಅಭಿನಂಧನೆ ಸಲ್ಲಿಸುವುದರ ಜೊತೆಗೆ ಮುಂದಿನ ವಿಭಾಗ ಮಟ್ಟದ ಸ್ಫರ್ಧೆಗೆ ತೆರಳಲು ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿದರು. ಆ ಮೂಲಕ ಕಲಿಯುತ್ತಿರುವ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮೇಘಾಳ ಉತ್ತಮ ಸಾಧನೆಯನ್ನು ಗೌರವಿಸಿ ಆಕೆಯ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.ಈ ಸಂದರ್ಭ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜು ಹರೀಶ್ ಸದಸ್ಯರಾದ ಭವನ್ ಸಾಮಾಜಿಕ ಕಾರ್ಯಕರ್ತರಾದ ಸತ್ಯ ಕರ್ಕೇರ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು