7:02 AM Sunday31 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಭತ್ತ ಬೇರ್ಪಡಿಸುವ ಯಂತ್ರ ಆವಿಷ್ಕಾರ: ಹಾಕತ್ತೂರು 10ನೇ ತರಗತಿ ವಿದ್ಯಾರ್ಥಿನಿಯ ಮಹಾನ್ ಸಾಧನೆ

25/01/2023, 10:52

ಮಡಿಕೇರಿ(reporterkarnataka.com): ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿರುವ ಬಡವರ ಮನೆಯ ಮಗಳು ಇವಳು. ವಯಸ್ಸು ಕಿರಿದಾದರೂ ಸಾಧನೆ ಮಾತ್ರ ಹಿರಿದು.


ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ ಮೆಘಾ ಎಸ್. ಅವರು ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ 10ನೇ ತರಗತಿಯ ವಿಧ್ಯಾರ್ಥಿನಿ.
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಆನಂತರ
ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊನ್ನೆಮೊನ್ನೆ ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇಯ ಸ್ಥಾನವನ್ನು ಪಡೆದು ಇದೀಗ ಕೇರಳದ ತ್ರಿಶೂರ್ ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ತಮ್ಮ ಗ್ರಾಮದ ವಿದ್ಯಾರ್ಥಿನಿ ಮೆಘಾಳ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು ಯುವಕ ಸಂಘದ ಪದಾಧಿಕಾರಿಗಳು ಈ ದಿನ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಅಭಿನಂಧನೆ ಸಲ್ಲಿಸುವುದರ ಜೊತೆಗೆ ಮುಂದಿನ ವಿಭಾಗ ಮಟ್ಟದ ಸ್ಫರ್ಧೆಗೆ ತೆರಳಲು ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿದರು. ಆ ಮೂಲಕ ಕಲಿಯುತ್ತಿರುವ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮೇಘಾಳ ಉತ್ತಮ ಸಾಧನೆಯನ್ನು ಗೌರವಿಸಿ ಆಕೆಯ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.ಈ ಸಂದರ್ಭ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜು ಹರೀಶ್ ಸದಸ್ಯರಾದ ಭವನ್ ಸಾಮಾಜಿಕ ಕಾರ್ಯಕರ್ತರಾದ ಸತ್ಯ ಕರ್ಕೇರ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು