8:01 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಭತ್ತ ಬೇರ್ಪಡಿಸುವ ಯಂತ್ರ ಆವಿಷ್ಕಾರ: ಹಾಕತ್ತೂರು 10ನೇ ತರಗತಿ ವಿದ್ಯಾರ್ಥಿನಿಯ ಮಹಾನ್ ಸಾಧನೆ

25/01/2023, 10:52

ಮಡಿಕೇರಿ(reporterkarnataka.com): ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿರುವ ಬಡವರ ಮನೆಯ ಮಗಳು ಇವಳು. ವಯಸ್ಸು ಕಿರಿದಾದರೂ ಸಾಧನೆ ಮಾತ್ರ ಹಿರಿದು.


ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ ಮೆಘಾ ಎಸ್. ಅವರು ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ 10ನೇ ತರಗತಿಯ ವಿಧ್ಯಾರ್ಥಿನಿ.
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಆನಂತರ
ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊನ್ನೆಮೊನ್ನೆ ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇಯ ಸ್ಥಾನವನ್ನು ಪಡೆದು ಇದೀಗ ಕೇರಳದ ತ್ರಿಶೂರ್ ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ತಮ್ಮ ಗ್ರಾಮದ ವಿದ್ಯಾರ್ಥಿನಿ ಮೆಘಾಳ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು ಯುವಕ ಸಂಘದ ಪದಾಧಿಕಾರಿಗಳು ಈ ದಿನ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಅಭಿನಂಧನೆ ಸಲ್ಲಿಸುವುದರ ಜೊತೆಗೆ ಮುಂದಿನ ವಿಭಾಗ ಮಟ್ಟದ ಸ್ಫರ್ಧೆಗೆ ತೆರಳಲು ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿದರು. ಆ ಮೂಲಕ ಕಲಿಯುತ್ತಿರುವ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮೇಘಾಳ ಉತ್ತಮ ಸಾಧನೆಯನ್ನು ಗೌರವಿಸಿ ಆಕೆಯ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಲಾಯಿತು.ಈ ಸಂದರ್ಭ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ವಿಜು ಹರೀಶ್ ಸದಸ್ಯರಾದ ಭವನ್ ಸಾಮಾಜಿಕ ಕಾರ್ಯಕರ್ತರಾದ ಸತ್ಯ ಕರ್ಕೇರ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು