9:47 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಭತ್ತದ ಬೆಳೆಗೆ ಬೆಂಕಿ ರೋಗ: ಹತೋಟಿ ಹೇಗೆ?; ಬಣಕಲ್ ರೈತ ಸಂಪರ್ಕ ಕೇಂದ್ರದ ಸಲಹೆ ಏನು?

12/10/2023, 13:39

ಮೂಡಿಗೆರೆ(reporterkarnataka.com): ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತವೆ.
1.*ಬೆಂಕಿ ರೋಗ*: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದಿನಗಳಲ್ಲಿ ಬೂದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಇಂತಹ ಹಲವಾರು ಚುಕ್ಕೆಗಳು ಸೇರಿ ಎಲೆಗಳು ಸುಟ್ಟಂತೆ ಕಾಣುತ್ತವೆ.

ಬೆಂಕಿ ರೋಗದ ಹತೋಟಿಗೆ
*TRICYCLAZOLE* ಶಿಲೀಂದ್ರ ನಾಶಕವನ್ನು *0.6 ಗ್ರಾಂ* ಅನ್ನು ಪ್ರತಿ ಲೀಟರಿಗೆ ಬೆರೆಸಿ ಸಿಂಪರಣೆ ಮಾಡಬೇಕಾಗಿರುತ್ತದೆ.

2. *ಎಲೆ ಸುರುಳಿ ಹುಳು*:
ಮರಿ ಹುಳುಗಳು ಎಲೆಗಳನ್ನು ಸುರುಳಿ ಮಾಡಿ ಅದರೊಳಗೆ ಇದ್ದು ಹಸಿರು ಭಾಗವನ್ನು ಕೆರೆದು ತಿನ್ನುವುದರಿಂದ ಗಳ ಮೇಲೆ ಬಿಳಿ ಪಟ್ಟಿಗಳು ಕಾಣುತ್ತವೆ.
ಈ ಹುಳುಗಳನ್ನು ಹತೋಟಿಗೆ ತರಲು ಕ್ಲೋರೋಫೈರಿಪಾಸ್ ಕೀಟನಾಶಕವನ್ನು 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕಾಗಿರುತ್ತದೆ.
Tricyclazole ಶಿಲೀಂದ್ರ ನಾಶಕ ಹಾಗೂ ಕ್ಲೋರೋಫೈರಿಫಾಸ್ ಕೀಟನಾಶಕವು ಬಣಕಲ್
ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುತ್ತದೆ.
ರೈತರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗಿ
ಬಣಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ
ವೆಂಕಟೇಶ್ ಎಂ ಆರ್
(8638162020) ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು