9:59 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಭತ್ತದ ಬೆಳೆಗೆ ಬೆಂಕಿ ರೋಗ: ಹತೋಟಿ ಹೇಗೆ?; ಬಣಕಲ್ ರೈತ ಸಂಪರ್ಕ ಕೇಂದ್ರದ ಸಲಹೆ ಏನು?

12/10/2023, 13:39

ಮೂಡಿಗೆರೆ(reporterkarnataka.com): ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತವೆ.
1.*ಬೆಂಕಿ ರೋಗ*: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದಿನಗಳಲ್ಲಿ ಬೂದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಇಂತಹ ಹಲವಾರು ಚುಕ್ಕೆಗಳು ಸೇರಿ ಎಲೆಗಳು ಸುಟ್ಟಂತೆ ಕಾಣುತ್ತವೆ.

ಬೆಂಕಿ ರೋಗದ ಹತೋಟಿಗೆ
*TRICYCLAZOLE* ಶಿಲೀಂದ್ರ ನಾಶಕವನ್ನು *0.6 ಗ್ರಾಂ* ಅನ್ನು ಪ್ರತಿ ಲೀಟರಿಗೆ ಬೆರೆಸಿ ಸಿಂಪರಣೆ ಮಾಡಬೇಕಾಗಿರುತ್ತದೆ.

2. *ಎಲೆ ಸುರುಳಿ ಹುಳು*:
ಮರಿ ಹುಳುಗಳು ಎಲೆಗಳನ್ನು ಸುರುಳಿ ಮಾಡಿ ಅದರೊಳಗೆ ಇದ್ದು ಹಸಿರು ಭಾಗವನ್ನು ಕೆರೆದು ತಿನ್ನುವುದರಿಂದ ಗಳ ಮೇಲೆ ಬಿಳಿ ಪಟ್ಟಿಗಳು ಕಾಣುತ್ತವೆ.
ಈ ಹುಳುಗಳನ್ನು ಹತೋಟಿಗೆ ತರಲು ಕ್ಲೋರೋಫೈರಿಪಾಸ್ ಕೀಟನಾಶಕವನ್ನು 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕಾಗಿರುತ್ತದೆ.
Tricyclazole ಶಿಲೀಂದ್ರ ನಾಶಕ ಹಾಗೂ ಕ್ಲೋರೋಫೈರಿಫಾಸ್ ಕೀಟನಾಶಕವು ಬಣಕಲ್
ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುತ್ತದೆ.
ರೈತರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗಿ
ಬಣಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ
ವೆಂಕಟೇಶ್ ಎಂ ಆರ್
(8638162020) ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು