2:22 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಭತ್ತದ ಬೆಳೆಗೆ ಬೆಂಕಿ ರೋಗ: ಹತೋಟಿ ಹೇಗೆ?; ಬಣಕಲ್ ರೈತ ಸಂಪರ್ಕ ಕೇಂದ್ರದ ಸಲಹೆ ಏನು?

12/10/2023, 13:39

ಮೂಡಿಗೆರೆ(reporterkarnataka.com): ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತವೆ.
1.*ಬೆಂಕಿ ರೋಗ*: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದಿನಗಳಲ್ಲಿ ಬೂದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಇಂತಹ ಹಲವಾರು ಚುಕ್ಕೆಗಳು ಸೇರಿ ಎಲೆಗಳು ಸುಟ್ಟಂತೆ ಕಾಣುತ್ತವೆ.

ಬೆಂಕಿ ರೋಗದ ಹತೋಟಿಗೆ
*TRICYCLAZOLE* ಶಿಲೀಂದ್ರ ನಾಶಕವನ್ನು *0.6 ಗ್ರಾಂ* ಅನ್ನು ಪ್ರತಿ ಲೀಟರಿಗೆ ಬೆರೆಸಿ ಸಿಂಪರಣೆ ಮಾಡಬೇಕಾಗಿರುತ್ತದೆ.

2. *ಎಲೆ ಸುರುಳಿ ಹುಳು*:
ಮರಿ ಹುಳುಗಳು ಎಲೆಗಳನ್ನು ಸುರುಳಿ ಮಾಡಿ ಅದರೊಳಗೆ ಇದ್ದು ಹಸಿರು ಭಾಗವನ್ನು ಕೆರೆದು ತಿನ್ನುವುದರಿಂದ ಗಳ ಮೇಲೆ ಬಿಳಿ ಪಟ್ಟಿಗಳು ಕಾಣುತ್ತವೆ.
ಈ ಹುಳುಗಳನ್ನು ಹತೋಟಿಗೆ ತರಲು ಕ್ಲೋರೋಫೈರಿಪಾಸ್ ಕೀಟನಾಶಕವನ್ನು 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕಾಗಿರುತ್ತದೆ.
Tricyclazole ಶಿಲೀಂದ್ರ ನಾಶಕ ಹಾಗೂ ಕ್ಲೋರೋಫೈರಿಫಾಸ್ ಕೀಟನಾಶಕವು ಬಣಕಲ್
ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುತ್ತದೆ.
ರೈತರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗಿ
ಬಣಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ
ವೆಂಕಟೇಶ್ ಎಂ ಆರ್
(8638162020) ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು