5:32 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು