1:40 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು