3:24 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು