7:20 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಭಯೋತ್ಪಾಕರ ಬಹಿಷ್ಕರಿಸಿ ಸಮುದಾಯದ ಎಲ್ಲ ಸವಲತ್ತುಗಳಿಂದ ದೂರ ಇಡಬೇಕು: ಶಾಸಕ ಡಾ.ಭರತ್ ಶೆಟ್ಟಿ

25/11/2022, 10:51

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು ,ಮುಸ್ಲಿಂ ಮುಖಂಡರು ಖಂಡಿಸುವ ಮತ್ತು
,ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ ,ಬೆಂಬಲ ನೀಡಿದ ಜನರನ್ನು ಹಾಗೂ ಸಂಘಟನೆಗಳನ್ನು ಬಹಿಷ್ಕರಿಸಿ ದೂರವಿಡುವ ಮೂಲಕ ದೇಶದ ಹಿತಕ್ಕಾಗಿ ಎನ್ ಐ ಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಬೇಕಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸ್ಪೋಟಕ್ಕೆ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಹೊಣೆ ಹೊತ್ತಿದೆ. ಸರಕಾರ ಉಗ್ರ ನಿಗ್ರಹಕ್ಕೆ ಬೇಕಾದ ಕ್ರಮ ಕೈಗೊಳ್ಳುತ್ತದೆ.
ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಸಮುದಾಯದ ನಾಯಕರು ಗುರುತಿಸಿ ಮಾಹಿತಿ ನೀಡಿ ಇಂತಹ ಕೃತ್ಯ ಮುಂದೆ ನಡೆಯದಂತೆ ಎಚ್ಚೆತ್ತುಕೊಳ್ಳಬೇಕು.

“ಸಾಮರಸ್ಯ, ಭ್ರಾತೃತ್ವ ಕೇವಲ ಬಾಯಿ ಮಾತಾಗದಿರಲಿ. ಆಡಿದ್ದನ್ನು ಮಾಡಿ ತೋರಿಸುವ ಗುಣವೂ ಇರಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೆ ಜಿ ಹಳ್ಳಿ,ಡಿ ಜೆ ಹಳ್ಳಿ ಘಟನೆ ನಡೆದಾಗಲೇ ಎಚ್ಚೆತ್ತುಕೊಂಡು
ಮುಸ್ಲಿಂ ಮುಖಂಡರು ಸಮುದಾಯದಲ್ಲಿ ಮತಾಂಧತೆಯನ್ನು ಹೆಚ್ಚಿಸಿಕೊಂಡು ದಾರಿ ತಪ್ಪಿದ , ಭಯೋತ್ಪಾದನೆಯಲ್ಲಿ ನಿರತವಾಗಿರುವವರ ಗೌಪ್ಯ ಮಾಹಿತಿನ್ನು ಎನ್ ಐ ಎ ಗೆ ನೀಡಬೇಕಿತ್ತು.
ಇದನ್ನು ಸಮುದಾಯ ನಿರ್ಲಕ್ಷಿಸಿದ್ದರಿಂದಲೇ ಮಂಗಳೂರು ಘಟನೆ ನಡೆಯಲು ಕಾರಣವಾಗಿದೆ.

ದೇಶ, ವಿದೇಶದಿಂದ ಹಣ ಪಡೆದು, ಭಯೋತ್ಪಾದನೆಯನ್ನು ನಡೆಸುತ್ತಿರುವುದರ ಘಟನೆಗಳನ್ನು ಸಮುದಾಯದ ನಾಯಕರು ಗಂಭೀರವಾಗಿ ಪರಿಗಣಿಸದೆ ಇದ್ದ ಪರಿಣಾಮ ಮಂಗಳೂರಿನಲ್ಲಿ ಭಾರೀ ಅನಾಹುತದ ಸಂಚು ರೂಪಿತವಾಗಿದೆ ಎಂದು ಡಾ.ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು