5:29 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಭಯೋತ್ಪಾಕರ ಬಹಿಷ್ಕರಿಸಿ ಸಮುದಾಯದ ಎಲ್ಲ ಸವಲತ್ತುಗಳಿಂದ ದೂರ ಇಡಬೇಕು: ಶಾಸಕ ಡಾ.ಭರತ್ ಶೆಟ್ಟಿ

25/11/2022, 10:51

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು ,ಮುಸ್ಲಿಂ ಮುಖಂಡರು ಖಂಡಿಸುವ ಮತ್ತು
,ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ ,ಬೆಂಬಲ ನೀಡಿದ ಜನರನ್ನು ಹಾಗೂ ಸಂಘಟನೆಗಳನ್ನು ಬಹಿಷ್ಕರಿಸಿ ದೂರವಿಡುವ ಮೂಲಕ ದೇಶದ ಹಿತಕ್ಕಾಗಿ ಎನ್ ಐ ಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಬೇಕಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸ್ಪೋಟಕ್ಕೆ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಹೊಣೆ ಹೊತ್ತಿದೆ. ಸರಕಾರ ಉಗ್ರ ನಿಗ್ರಹಕ್ಕೆ ಬೇಕಾದ ಕ್ರಮ ಕೈಗೊಳ್ಳುತ್ತದೆ.
ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಸಮುದಾಯದ ನಾಯಕರು ಗುರುತಿಸಿ ಮಾಹಿತಿ ನೀಡಿ ಇಂತಹ ಕೃತ್ಯ ಮುಂದೆ ನಡೆಯದಂತೆ ಎಚ್ಚೆತ್ತುಕೊಳ್ಳಬೇಕು.

“ಸಾಮರಸ್ಯ, ಭ್ರಾತೃತ್ವ ಕೇವಲ ಬಾಯಿ ಮಾತಾಗದಿರಲಿ. ಆಡಿದ್ದನ್ನು ಮಾಡಿ ತೋರಿಸುವ ಗುಣವೂ ಇರಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೆ ಜಿ ಹಳ್ಳಿ,ಡಿ ಜೆ ಹಳ್ಳಿ ಘಟನೆ ನಡೆದಾಗಲೇ ಎಚ್ಚೆತ್ತುಕೊಂಡು
ಮುಸ್ಲಿಂ ಮುಖಂಡರು ಸಮುದಾಯದಲ್ಲಿ ಮತಾಂಧತೆಯನ್ನು ಹೆಚ್ಚಿಸಿಕೊಂಡು ದಾರಿ ತಪ್ಪಿದ , ಭಯೋತ್ಪಾದನೆಯಲ್ಲಿ ನಿರತವಾಗಿರುವವರ ಗೌಪ್ಯ ಮಾಹಿತಿನ್ನು ಎನ್ ಐ ಎ ಗೆ ನೀಡಬೇಕಿತ್ತು.
ಇದನ್ನು ಸಮುದಾಯ ನಿರ್ಲಕ್ಷಿಸಿದ್ದರಿಂದಲೇ ಮಂಗಳೂರು ಘಟನೆ ನಡೆಯಲು ಕಾರಣವಾಗಿದೆ.

ದೇಶ, ವಿದೇಶದಿಂದ ಹಣ ಪಡೆದು, ಭಯೋತ್ಪಾದನೆಯನ್ನು ನಡೆಸುತ್ತಿರುವುದರ ಘಟನೆಗಳನ್ನು ಸಮುದಾಯದ ನಾಯಕರು ಗಂಭೀರವಾಗಿ ಪರಿಗಣಿಸದೆ ಇದ್ದ ಪರಿಣಾಮ ಮಂಗಳೂರಿನಲ್ಲಿ ಭಾರೀ ಅನಾಹುತದ ಸಂಚು ರೂಪಿತವಾಗಿದೆ ಎಂದು ಡಾ.ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು