8:58 PM Monday23 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ…

ಇತ್ತೀಚಿನ ಸುದ್ದಿ

ಅದ್ಯಪಾಡಿ ಬೈಲುಬೀಡಿನ ಬಳಿ ಬಿರುಕು ಬಿಟ್ಟ ರಸ್ತೆ ; ಘನ ವಾಹನ ಸಂಚಾರ ನಿಷೇಧ

16/06/2025, 14:19


ಬಜಪೆ (reporterkarnataka.com
)
ಚಿತ್ರಗಳು : ಪ್ರಸಾದ್ ಕೊಳಂಬೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಬಜಪೆ ಅದ್ಯಪಾಡಿ ಸಮೀಪದ ಬೈಲುಬೀಡಿನ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ.

ಅದ್ಯಪಾಡಿಗೆ ಬಜಪೆಯನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು, ಜನರು ಅನ್ಯ ಮಾರ್ಗವನ್ನು ಅವಲಂಬಿಸುವಂತಾಗಿದೆ. ಜತೆಗೆ ಕೈಕಂಬ ಮೂಲಕ ಮೂಡುಕೆರೆ ಬಜಪೆಗೆ ಸಾಗುವವರಿಗೆ ಸಂಕಷ್ಟ ಉಂಟಾಗಿದೆ.

ಸಮೀಪದ ಗುಡ್ಡದ ಮೇಲಿನ ಮರಗಳನ್ನು ಕಡಿಯಲಾಗಿದ್ದು, ನೀರು ಹರಿಯುವಾಗ ಮಣ್ಣಿನ ಸವಕಳಿಯ ಜತೆಗೆ ನೆಲಕ್ಕೂ ನೀರು ಇಂಗಿ ಒಳಭಾಗದಲ್ಲಿ ಹರಿವಿನಿಂದಾಗಿ ರಸ್ತೆಯೂ ಬಿರುಕು ಬಿಟ್ಟಿರಬಹುದು ಎನ್ನಲಾಗುತ್ತಿದೆ. ಮತ್ತೊಂದು ಕಡೆಯಲ್ಲಿ ಏರ್ಪೋರ್ಟ್ ಮೇಲೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಿಮಾನ ನಿಲ್ದಾಣದಿಂದ ಹರಿಯಬಿಡುತ್ತಿರುವ ನೀರಿನಿಂದ ಹೀಗಾಗುತ್ತಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು