3:41 AM Thursday31 - July 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಅದ್ಯಪಾಡಿ ಬೈಲುಬೀಡಿನ ಬಳಿ ಬಿರುಕು ಬಿಟ್ಟ ರಸ್ತೆ ; ಘನ ವಾಹನ ಸಂಚಾರ ನಿಷೇಧ

16/06/2025, 14:19


ಬಜಪೆ (reporterkarnataka.com
)
ಚಿತ್ರಗಳು : ಪ್ರಸಾದ್ ಕೊಳಂಬೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಬಜಪೆ ಅದ್ಯಪಾಡಿ ಸಮೀಪದ ಬೈಲುಬೀಡಿನ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ.

ಅದ್ಯಪಾಡಿಗೆ ಬಜಪೆಯನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು, ಜನರು ಅನ್ಯ ಮಾರ್ಗವನ್ನು ಅವಲಂಬಿಸುವಂತಾಗಿದೆ. ಜತೆಗೆ ಕೈಕಂಬ ಮೂಲಕ ಮೂಡುಕೆರೆ ಬಜಪೆಗೆ ಸಾಗುವವರಿಗೆ ಸಂಕಷ್ಟ ಉಂಟಾಗಿದೆ.

ಸಮೀಪದ ಗುಡ್ಡದ ಮೇಲಿನ ಮರಗಳನ್ನು ಕಡಿಯಲಾಗಿದ್ದು, ನೀರು ಹರಿಯುವಾಗ ಮಣ್ಣಿನ ಸವಕಳಿಯ ಜತೆಗೆ ನೆಲಕ್ಕೂ ನೀರು ಇಂಗಿ ಒಳಭಾಗದಲ್ಲಿ ಹರಿವಿನಿಂದಾಗಿ ರಸ್ತೆಯೂ ಬಿರುಕು ಬಿಟ್ಟಿರಬಹುದು ಎನ್ನಲಾಗುತ್ತಿದೆ. ಮತ್ತೊಂದು ಕಡೆಯಲ್ಲಿ ಏರ್ಪೋರ್ಟ್ ಮೇಲೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಿಮಾನ ನಿಲ್ದಾಣದಿಂದ ಹರಿಯಬಿಡುತ್ತಿರುವ ನೀರಿನಿಂದ ಹೀಗಾಗುತ್ತಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು