2:53 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಬಿ.ಸಿ. ರೋಡ್: ಬಿಜೆಪಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆ

12/09/2023, 20:21

ಬಂಟ್ವಾಳ(reporterkarnataka.com): ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆಯು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಂಡಲದ ನಿಕಟಪೂರ್ವ ಅಧ್ಯಕ್ಷರು, ಮತದಾರರ ಚೇತನಾ ಮಹಾಭಿಯಾನದ ಜಿಲ್ಲಾ ಸಂಚಾಲಕರ ದೇವದಾಸ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ಈ ಮಹಾಭಿಯಾನದ ಕಾರ್ಯ ಯೋಜನೆ ಮತ್ತು ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸಭೆಯನ್ನು ಉದ್ಧೇಶಿಸಿ ಮಾತಾಡಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಮಾತನಾಡಿ,ಬ ಬಂಟ್ವಾಳ ಬಿಜೆಪಿಯೊಂದಿಗೆ ಸದಾ ನಿಕಟ ಸಂಪರ್ಕದಲ್ಲಿರುವ ಶಾಸಕ ರಾಜೇಶಣ್ಣನವರ ಸಹಕಾರದಿಂದ ಪ್ರತಿ ಬೂತಿನಲ್ಲಿ ಮತದಾರರ ಚೇತನಾ ಕಾರ್ಯವನ್ನು ಮೊದಲಿನಿಂದಲೇ ಮಾಡಿಕೊಂಡು ಬಂದಿದೆ. ಮತದಾರರ ಸೇರ್ಪಡೆ ಕಾರ್ಯದಲ್ಲಿ ಬಂಟ್ವಾಳ ಬೇರೆ ಕ್ಷೇತ್ರಗಳಿಗೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಈ ಮತದಾರರ ಚೇತನ ಮಹಾಭಿಯಾನವನ್ನು ಬಂಟ್ವಾಳವು ಅತ್ಯಂತ ಯಶಸ್ವಿಯಾಗಿ ನಡೆಸುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ ” ಎಂದರು.
ಈ ಸಭೆಯಲ್ಲಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಶ್ರೀ ಸಂದೇಶ್ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ
ದಿನೇಶ್ ಅಮ್ಟೂರು, ಮುಂತಾದವರು ಉಪಸ್ಥಿತರಿದ್ದರು. ಮಂಡಲ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಕ್ಷೇತ್ರ ಪ್ರಮುಖರು ಭಾಗವಹಿಸಿದ ಈ ಸಭೆಯಲ್ಲಿ ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ ವಂದೇ ಮಾತರಂ ಗೀತೆ ಹಾಡಿದರು. ಕ್ಷೇತ್ರ ಬಿಜೆಪಿ ಉಪಾಧ್ಯಾಕ್ಷರಾದ ವಜ್ರನಾಥ ಕಲ್ಲಡ್ಕ ಸ್ವಾಗತಿಸಿದರು. ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು