3:04 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

BCC | ಬಳ್ಳಾರಿ ಪಾಲಿಕೆ ನೀರು ಸರಬರಾಜು ವಿಭಾಗದ ನೌಕರರ ಪ್ರತಿಭಟನೆ: ಬೇಡಿಕೆ ಈಡೇರಿಕೆಗೆ ಆಗ್ರಹ

07/03/2025, 12:04

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡುವ ವೃತ್ತಿಯಲ್ಲಿ ತೊಡಗಿರುವ ನೌಕರರನ್ನು ಪೌರ ಕಾರ್ಮಿಕರ ರೀತಿಯಲ್ಲೇ ‘ಡಿ’ ವೃಂದಕ್ಕೆ ಪರಿಗಣಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ‘ನೀರು ಸರಬರಾಜು ಮತ್ತು ದುರಸ್ತಿ ಕಾರ್ಮಿಕರ ಸಂಘ’ದ ಸದಸ್ಯರು ನಡೆಸುತ್ತಿರುವ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದ ಕಾರ್ಮಿಕರು ಮಂಗಳವಾರ 3ನೇ ದಿನವೂ ಮುಂದುವರಿಸಿದರು.
‘ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಸೇವೆ ಕಾಯಂ ಮಾಡಬೇಕು’ ಎಂದು ಘೋಷಣೆ ಕೂಗಿದರು.
ಪ್ರತಿಭಟನೆಗೆ ಬಿಜೆಪಿಯ ಕೆಲ ಕಾರ್ಪೊರೇಟರ್‌ಗಳು, ಸಾಮಾಜಿಕ ಹೋರಾಟಗಾರರು ಮತ್ತು ಸಂಘ–ಸಂಸ್ಥೆಯ ಮುಖಂಡರು ಬೆಂಬಲ ನೀಡಿದರು.
ಈ ವೇಳೆ ಮಾತನಾಡಿದ ಸಂಘದ ಪ್ರಮುಖರು, ‘ಆಯುಕ್ತರು ಭೇಟಿಯಾಗಿದ್ದರು. ನೇರ ನೇಮಕಾತಿ ಮಾಡಿಕೊಳ್ಳಬೆಕು. ನಮ್ಮ ಬೇಡಿಕೆ ಈಡೇರುವ ವರೆಗೆ ಪ್ರತಿಭಟನೆ ಮುಂದುವರಿಸುತ್ತೇವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು