10:12 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಿಕಾಂ ಪರೀಕ್ಷೆಯಲ್ಲಿ ರಾಮೇಶ್ವರ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ!: ಪಾಸ್ ಆಗಲು ಮುಖ್ಯ ಕಾರಣ ಆಯ್ತಾ ಕೆಎಎಸ್?

02/01/2025, 21:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಅತ್ಯಂತ ವೈಭವದಿಂದ ತೆರೆ ಬಿದ್ದಿದ್ದು, ಈ ಜಾತ್ರೆಯನ್ನು ಬಿಕಾಂ ಪರೀಕ್ಷೆ ಎಂದೇ ಬಿಂಬಿಸಲಾಗಿತ್ತು. ಈಗ ಆ ಬಿಕಾಂ ಪರೀಕ್ಷೆಯನ್ನು ರಾಮೇಶ್ವರನೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣನಾಗಿದ್ದಾನೆ.
ಹೌದು ಈ ಬಾರಿಯ ಜಾತ್ರೆ ಪಬ್ಲಿಕ್ ಪರೀಕ್ಷೆಗಿಂತಲೂ ಕಷ್ಟವಾಗಿತ್ತು. ಮೊದಲಿಗೆ ಪರೀಕ್ಷೆಗೆ ಓದಲು ಪುಸ್ತಕ ಕೊಟ್ಟಾಗಲೇ ಪುಸ್ತಕದ ಬಗ್ಗೆ ಗಲಾಟೆಯಾಗಿ ಎರಡು ಪುಸ್ತಕಗಳನ್ನು ಮಾಡಲಾಯಿತು. ಒಂದೇ ಪುಸ್ತಕ ಓದುವುದು ಕಷ್ಟ ಅಂತಹದರಲ್ಲಿ ಎರಡು ಪುಸ್ತಕ ಓದಿ ಪರೀಕ್ಷೆ ಪಾಸ್ ಆಗುವುದು ಅಷ್ಟು ಸುಲಭದ ಮಾತು ಆಗಿರಲಿಲ್ಲ. ಆದರೆ ಪರೀಕ್ಷೆ ಬರೆಯಲು ಕುಳಿತ ಮೇಲೆ ಪುಸ್ತಕದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂಬಂತೆ ಪರೀಕ್ಷೆಗೆ ತಯಾರಿ ಮಾಡಲಾಯಿತು.
ನಂತರ ಎರಡು ಪುಸ್ತಕದ ಪಾಠಗಳನ್ನು ಒಂದೇ ಪುಸ್ತಕಕ್ಕೆ ತರಲಾಯಿತು. ಆಗ ಅನಿಸಿದ್ದು ಈ ಬಿ.ಕಾಂ ಪರೀಕ್ಷೆ ಬೇಕಿತ್ತಾ ಎಂದು. ಆದರೆ ಇದ್ಯಾವುದಕ್ಕೂ ಜಗ್ಗದೆ ಪರೀಕ್ಷೆ ಬರೆಯಲು ಮುಂದಾದ ರಾಮೇಶ್ವರನು ತನ್ನ ಸಹಾಯಕ್ಕೆ ಕರೆಸಿಕೊಂಡಿದ್ದು ಕೆ. ಎ . ಎಸ್ ಓದಿದವರನ್ನು. ಬಿ. ಕಾಂ ಪಾಸ್ ಆಗಲು ಟ್ಯೂಷನ್ ಬೇಕೇ ಬೇಕು ಎಂದು ತೀರ್ಮಾನಿಸಿ ತೀರ್ಥಹಳ್ಳಿಗೆ ಕೆ. ಎ ಎಸ್ ತಂಡವೇ ಬಂತೋ ಆಗ ಪರೀಕ್ಷೆಗೆ ಮತ್ತಷ್ಟು ರೋಚಕತೆ ಬಂತು.
ಸ್ವತಃ ರಾಮೇಶ್ವರನೇ ಬಿಕಾಂ ಪರೀಕ್ಷೆ ಬರೆಯುತ್ತಾನೆ ಎಂದು ವಿಷಯ ತಿಳಿದ ಕುಟುಂಬಸ್ಥರು ಈ ಪರೀಕ್ಷೆ ಹೇಗಿರಲಿದೆ? ಪರೀಕ್ಷೆ ಪಾಸ್ ಆಗುತ್ತಾ? ಅಥವಾ ಪರೀಕ್ಷೆಗೆ ಯಾರಾದರೂ ಅಡ್ಡಿ ಪಡಿಸುತ್ತಾರ? ಎಂದು ಭಯ ಪಟ್ಟಿದ ರಾಮೇಶ್ವರನ ಕುಟುಂಬಸ್ಥರಿಗೆ ಕಡೆಗೂ ಸಮಾಧಾನ ತರುವ ವಿಷಯ ಸಿಕ್ಕಿದೆ. ಮೂರು ದಿನ ನಡೆದ ಮಹಾ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಹೊಂದುವ ಮೂಲಕ ಎಷ್ಟೇಷ್ಟೋ ಪರೀಕ್ಷೆ ಬರೆದಿದ್ದು ಬಿ. ಕಾಂ ಪರೀಕ್ಷೆ ಒಂದು ಲೆಕ್ಕವೇ ಎಂದು ರಾಮೇಶ್ವರನೇ ಹೇಳಿದಂತಿದೆ.

ಅದೇನೇ ಆಗಲಿ ರಾಮೇಶ್ವರನು ಬಿಕಾಂ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣವಾಗುವುದಕ್ಕೆ ಕೆ ಎ ಎಸ್ ತಂಡದವರ ಟ್ಯೂಷನ್ ಕೂಡ ಮುಖ್ಯವಾಗಿತ್ತು. ಮೂರು ದಿನಗಳ ಕಾಲ ರಾಮೇಶ್ವರನನ್ನು ಪಾಸ್ ಮಾಡಲು ಪಣ ತೊಟ್ಟು ಕಡೆಗೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಮಾಡಿ ಕೆ ಎ ಎಸ್ ತಂಡ ವಾಪಾಸ್ ಆಗಿದೆ.
ರಾಮೇಶ್ವರನ ಕುಟುಂಬದವರು ಕೆ ಎ ಎಸ್ ತಂಡಕ್ಕೆ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು