8:22 PM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬೀಚ್ ಉತ್ಸವ, ಕಲಾಪರ್ಬ, ಚಿತ್ರಸಂತೆ, ಫಲಪುಷ್ಪ ಪ್ರದರ್ಶನ: ಡಿಸೆಂಬರ್ 19 ರಿಂದ ಮೇಳೈಸಲಿದೆ ಕರಾವಳಿ ಉತ್ಸವ

18/11/2025, 20:21

ಮಂಗಳೂರು(reporterkarnataka.com): ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮ ಡಿಸೆಂಬರ್ 19 ರಿಂದ ಜನವರಿ 4 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರಾವಳಿ ಉತ್ಸವದಲ್ಲಿ ಜನಾಕರ್ಷಣೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕøತಿಕ, ಚಿತ್ರಕಲೆ, ಸಾಹಸ ಹಾಗೂ ಪ್ರಾಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೀಚ್ ಉತ್ಸವ, ಕಲಾ ಪರ್ಬ, ಚಿತ್ರಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್‍ಗಳಲ್ಲಿ ವೈವಿಧ್ಯಮಯ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಕರಾವಳಿ ಉತ್ಸವದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ಪ್ರಮುಖವಾಗಿ ಬೀಚ್ ಫುಟ್‍ಬಾಲ್ ಮತ್ತು ವಾಲಿಬಾಲ್ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.
ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನವನ ಹಾಗೂ ಪ್ರಮುಖ ಬೀಚ್‍ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಬೈಕ್ ಮತ್ತು ಕಾರು ಪ್ರದರ್ಶನ ಹಾಗೂ ಶ್ವಾನ ಪ್ರದರ್ಶನ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪಿಲಿಕುಳದಲ್ಲಿಯೂ ಕರಾವಳಿ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ರೂಪುರೇಷೆ ಹಾಗೂ ಅಗತ್ಯ ಸಿದ್ಧತೆಗಳನ್ನು ನಡೆಸುವ ಬಗ್ಗೆ ಒಂದು ವಾರದೊಳಗೆ ವರದಿ ನೀಡಬೇಕು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಕೈಗೊಳ್ಳುವಂತೆ ಅವರು ತಿಳಿಸಿದರು.
ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಿಗೆ ನವ ಮಂಗಳೂರು ಬಂದರಿನಲ್ಲಿ ಹಡಗು ವೀಕ್ಷಣೆ ಹಾಗೂ ಕೋಸ್ಟ್‌ ಗಾರ್ಡ್ ನೌಕೆಗಳ ವೀಕ್ಷಣೆಗೆ ಅವಕಾಶ ನೀಡುವ ಕುರಿತು ಸಂಬಂಧಪಟ್ಟ ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್. ಎನ್., ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಪ್ರತಿನಿಧಿಗಳು, ವಿವಿಧ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು