4:10 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬೇಡ ಜಂಗಮ ಸತ್ಯಪ್ರತಿಪಾದನೆ ಹೋರಾಟಕ್ಕೆ ಬೆಂಬಲ:  ಮಸ್ಕಿ ಸೇವಾ ಸಮಿತಿ

28/06/2022, 14:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಬೇಡಜಂಗಮ ಸತ್ಯ ಪ್ರತಿಪಾದನಾ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

ಮಸ್ಕಿ ಸಮಾಜದ ಹಿರಿಯರಾದ ಮತ್ತು ಪೂಜ್ಯರ ಮಠಾಧೀಶರ ಶಿವಶರಣರ ಅಮೃತಹಸ್ತದಿಂದ ಹೋರಾಟಗಾರರು ಹಾಗೂ ಸಮಾಜ ವಕ್ತಾರರಾದ ಶ್ರೀ ಬಿಡಿ ಹಿರೇಮಠ ಅವರ ನೇತೃತ್ವದಲ್ಲಿ ಜೂನ್ 
30ರಂದು ನಡೆಯುವ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ವತಿಯಿಂದ ಬೆಂಬಲ ಸಹಕಾರ ಘೋಷಿಸಲಾಗಿದೆ.

ಸಮಾಜದ ಏಳಿಗೆಗಾಗಿ ನಡೆಯುವ ಹೋರಾಟದ ಕಾರ್ಯಕ್ರಮದಲ್ಲಿ ಮಠಾಧೀಶರ ಶಿವಶರಣರು ಹಾಗೂ ಸಮಾಜ ವಕ್ತಾರರಾದ  ಬಿಡಿ ಹಿರೇಮಠ,ನಾಡಿನ ಮಠಾಧೀಶರು, ಶರಣರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಸಚಿವರು, ಶಾಸಕರ ಹಾಗೂ ಮುಖ್ಯಮಂತ್ರಿಗಳ ಸಹಕಾರವೂ ಬೇಕು.

 ಎಲ್ಲರೂ ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಗೊಳುತ್ತದೆ ಎಂದು ಮಸ್ಕಿ ಜಂಗಮ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು