10:08 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಮಹಾತ್ಮಾ ಗಾಂಧಿ ಜಯಂತಿ ಆಚರಣೆ: ಬಾವೂಜಿ ಸ್ಮರಣೆ

03/10/2023, 13:30

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ಜಯಂತಿಯು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪಿತ ಬಾಪೂಜಿಯವರನ್ನು ಸ್ಮರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಸಂಘದ ಗೌರಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ. ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಗಾಂಧೀಜಿಯವರ ಅಹಿಂಸಾತ್ಮಕ ಹಾದಿಯಲ್ಲಿ ಎಂಥಹ ಬಲಾಡ್ಯರನ್ನು ಸೋಲಿಸಬಹುದು ಎಂದು ಜಗತ್ತಿಗೆ ತೋರಿಸಿಕೊಟ್ಟರು. ಸ್ವತಂತ್ರ ಭಾರತದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಗಾಗಿ ಹೋರಾಡಿದರು. ಗಾಂಧೀಜಿ ಯವರ ಸದ್ಭಾವನೆಯ ಚಿಂತನೆ ಎಲ್ಲ ಭಾರತೀಯರು ಮೈಗೂಡಿಸಿಕೊಳ್ಳಬೇಕು ಎಂದು ಅವರು ನುಡಿದರು.
ಡಿವೈಎಫ್ಐ ನಗರ ಅಧ್ಯಕ್ಷ ಜಗದೀಶ್ ಬಜಾಲ್, ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಉಪಾಧ್ಯಕ್ಷ ನೌಶಾದ್ ಉಳ್ಳಾಲ, ಮುಖಂಡರಾದ ಆಸೀಫ್ ಬಾವ ಉರುಮನೆ, ರೂಪೇಶ್, ಹನೀಫ್ ಸುರಲ್ಪಾಡಿ, ಮೇಬಲ್ ಡಿಸೋಜಾ,ರಿಯಾಜ್ ಎಲ್ಯರ್ ಪದವು, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು