12:34 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಡಿವೈಎಫ್ ಐ ಆರೋಪ; ಪೊಲೀಸ್ ಠಾಣೆಗೆ ಮುತ್ತಿಗೆ

25/03/2023, 23:52

ಮಂಗಳೂರು(reporterkarnataka.com): ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ನಡೆದಿದೆ. ಇದನ್ನು ಪ್ರತಿಭಟಿಸಿ ಡಿವೈಎಫ್ ಐ ವತಿಯಿಂದ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.


ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ ನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯಿಂದ ಅನುಮೋದಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳಾಗಿದ್ದರು.
ಘಟನೆಯ ಮಾಹಿತಿ ತಿಳಿದು ಪೊಲೀಸ್ ಠಾಣೆಗೆ ನೂರಾರು ಬೀದಿ ವ್ಯಾಪಾರಿಗಳೊಂದಿಗೆ ದೌಡಾಯಿಸಿದ ಬೀದಿಬದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಹಾಗೂ ಡಿವೈಎಫ್ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತು ಸಂಘದ ಪದಾಧಿಕಾರಿಗಳು ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ ಪರಿಣಾಮ ಬಂಧಿತರಿಬ್ಬರನ್ನು ಬಿಡುಗಡೆಗೊಳಿಸಿದ್ದಾರೆ.
ಅಲ್ಲದೆ, ಬಂಧಿಸಲ್ಪಟ್ಟಿದ್ದವರು ವ್ಯಾಪಾರ ಮಾಡುತ್ತಿದ್ದ ಮೈದಾನ ರಸ್ತೆಗೆ ಪೊಲೀಸರನ್ನು ಕರೆಸಿಕೊಂಡ ಬೀದಿಬದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಇಮ್ತಿಯಾಝ್, ಫುಟ್ ಪಾತ್ ಮೇಲೆ ನಿರ್ಮಿಸಲಾಗಿರುವ ಕಟ್ಟಡಗಳು, ಅಂಗಡಿ, ಮಳಿಗೆಗಳನ್ನು ಮೊದಲು ತೆರವುಗೊಳಿಸಿ ಬಳಿಕ ಬಡ ಬೀದಿಬದಿ ವ್ಯಾಪಾರಿಗಳ ತಳ್ಳುಗಾಡಿಗಳನ್ನು ತೆರವು ಗೊಳಿಸುವಂತೆ ತರಾಟೆಗೆ ತೆಗೆದುಕೊಂಡರು.
ಬಿಡುಗಡೆಯಾದ ಬೀದಿ ವ್ಯಾಪಾರಿಗಳ ಜೊತೆ ಮೈದಾನ ರಸ್ತೆವರೆಗೆ ಮೆರವಣಿಗೆ ನಡೆಸಿ ಅದೇ ಸ್ಥಳದಲ್ಲಿ ವ್ಯಾಪಾರ ನಡೆಸುವುದಾಗಿ ಪಟ್ಟು ಹಿಡಿದ ಸಂಘದ ಮುಖಂಡರು ಅಲ್ಲೇ ಮತ್ತೆ ವ್ಯಾಪಾರ ಆರಂಭಿಸಿದರು ಮತ್ತು ನಗರದಲ್ಲಿ ಬಡ ಬೀದಿ ವ್ಯಾಪಾರಿಗಳು ತಮ್ಮ ಬದುಕಿಗಾಗಿ ವ್ಯಾಪಾರ ಮಾಡಿದರೆ ಬಂಧನ ಕೇಸು ಹಾಕಲಾಗುತ್ತದೆ ಶ್ರೀಮಂತರು ಬೀದಿಯಲ್ಲಿ ಆಹಾರದ ಉತ್ಸವ ನಡೆಸಿದರೆ ರಸ್ತೆಗಳನ್ನು ಮುಚ್ಚಿ ವಾಹನಗಳನ್ನು ತಡೆದು ರಸ್ತೆಯಲ್ಲೇ ಕಸಗಳನ್ನು ರಾಶಿ ಹಾಕುವವರಿಗೆ ಪೊಲೀಸ್ ಕಾವಲಿನಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಬೀದಿ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಮುಖಂಡರಾದ ಸಂತೋಷ್ ಆರ್.ಎಸ್, ಆಸೀಫ್ ಬಾವ ಉರುಮನೆ, ಆನಂದ, ರಹಿಮಾನ್ ಅಡ್ಯಾರ್, ನೌಶಾದ್ ಉಳ್ಳಾಲ, ರಿಯಾಜ್ ಎಲ್ಯರ್ ಪದವು, ರಿಹಾಬ್ ಬಂದರ್, ಶೌಕತ್ ಆಲಿ, ಮುಝಫ್ಫರ್ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು