6:54 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಉತ್ತಮ ವಿಧಾನ: ಪುತ್ತೂರು ಶಾಸಕ ಅಶೋಕ್ ರೈ

10/07/2024, 16:42

ಪುತ್ತೂರು(reporterkarnataka.com): ಬೀದಿ ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಮಾಜದ ಎಲ್ಲಾ ಸ್ತರದಲ್ಲೂ ಕೆಲಸಗಳು ನಡೆಯಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಮಂಗಳವಾರ ಪೋಳ್ಯದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ವತಿಯಿಂದ ನಡೆದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯದಲ್ಲಿ ಭಾಗವಹಿಸಿ ಮಾತನಾಡಿದರು.

ಮುಳಿಯ ಜ್ಯುವೆಲ್ಸ್ ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಅಪಘಾತಕ್ಕೊಳಗಾದ ನಾಯಿಗಳಿಗೆ ತುರ್ತು ಚಿಕಿತ್ಸೆ ನೀಡುವ ಜತೆಗೆ ಆರೋಗ್ಯ ಸರಿಯಿಲ್ಲದ ನಾಯಿಗಳ ಆರೈಕೆ ಮಾಡುವ ಕೇಂದ್ರದ ಸ್ಥಾಪನೆಯ ಯೋಚನೆಯನ್ನು ಹಾಕಿಕೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆಯ ಬಳಿಕ ಅವುಗಳ ಪಾಲನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೂಲಕ ಬೀದಿ ನಾಯಿಗಳ ಸಂಖ್ಯೆ ಕಡಿಮೆ ಮಾಡುವ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರು.
125ಕ್ಕೂ ಅಧಿಕ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು