9:23 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಉತ್ತಮ ವಿಧಾನ: ಪುತ್ತೂರು ಶಾಸಕ ಅಶೋಕ್ ರೈ

10/07/2024, 16:42

ಪುತ್ತೂರು(reporterkarnataka.com): ಬೀದಿ ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಮಾಜದ ಎಲ್ಲಾ ಸ್ತರದಲ್ಲೂ ಕೆಲಸಗಳು ನಡೆಯಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಮಂಗಳವಾರ ಪೋಳ್ಯದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ವತಿಯಿಂದ ನಡೆದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯದಲ್ಲಿ ಭಾಗವಹಿಸಿ ಮಾತನಾಡಿದರು.

ಮುಳಿಯ ಜ್ಯುವೆಲ್ಸ್ ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಅಪಘಾತಕ್ಕೊಳಗಾದ ನಾಯಿಗಳಿಗೆ ತುರ್ತು ಚಿಕಿತ್ಸೆ ನೀಡುವ ಜತೆಗೆ ಆರೋಗ್ಯ ಸರಿಯಿಲ್ಲದ ನಾಯಿಗಳ ಆರೈಕೆ ಮಾಡುವ ಕೇಂದ್ರದ ಸ್ಥಾಪನೆಯ ಯೋಚನೆಯನ್ನು ಹಾಕಿಕೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆಯ ಬಳಿಕ ಅವುಗಳ ಪಾಲನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೂಲಕ ಬೀದಿ ನಾಯಿಗಳ ಸಂಖ್ಯೆ ಕಡಿಮೆ ಮಾಡುವ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರು.
125ಕ್ಕೂ ಅಧಿಕ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು