4:51 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಉತ್ತಮ ವಿಧಾನ: ಪುತ್ತೂರು ಶಾಸಕ ಅಶೋಕ್ ರೈ

10/07/2024, 16:42

ಪುತ್ತೂರು(reporterkarnataka.com): ಬೀದಿ ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದ್ದು, ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕಾರ್ಯವಾಗಿದೆ. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಸಮಾಜದ ಎಲ್ಲಾ ಸ್ತರದಲ್ಲೂ ಕೆಲಸಗಳು ನಡೆಯಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಮಂಗಳವಾರ ಪೋಳ್ಯದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ವತಿಯಿಂದ ನಡೆದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯದಲ್ಲಿ ಭಾಗವಹಿಸಿ ಮಾತನಾಡಿದರು.

ಮುಳಿಯ ಜ್ಯುವೆಲ್ಸ್ ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಅಪಘಾತಕ್ಕೊಳಗಾದ ನಾಯಿಗಳಿಗೆ ತುರ್ತು ಚಿಕಿತ್ಸೆ ನೀಡುವ ಜತೆಗೆ ಆರೋಗ್ಯ ಸರಿಯಿಲ್ಲದ ನಾಯಿಗಳ ಆರೈಕೆ ಮಾಡುವ ಕೇಂದ್ರದ ಸ್ಥಾಪನೆಯ ಯೋಚನೆಯನ್ನು ಹಾಕಿಕೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆಯ ಬಳಿಕ ಅವುಗಳ ಪಾಲನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೂಲಕ ಬೀದಿ ನಾಯಿಗಳ ಸಂಖ್ಯೆ ಕಡಿಮೆ ಮಾಡುವ ಕಾರ್ಯ ನಡೆಯುತ್ತದೆ ಎಂದು ತಿಳಿಸಿದರು.
125ಕ್ಕೂ ಅಧಿಕ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮಲ್ಪೆ ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು