11:38 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬೀದಿ ವ್ಯಾಪಾರಿಗಳ ಮೇಲೆ ಪಾಲಿಕೆ ಬಿಜೆಪಿ ಆಡಳಿತ ಕಾರ್ಯಾಚರಣೆ: ಸಿಪಿಎಂ ಖಂಡನೆ

01/08/2024, 18:20

ಮಂಗಳೂರು(reporterkarnataka.com):ನಗರದ ರಸ್ತೆಬದಿಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿ ಜೀವನ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳ ಮೇಲೆ ಟೈಗರ್ ಕಾರ್ಯಾಚರಣೆಯ ಹೆಸರಿನಲ್ಲಿ ಅವರ ಅಂಗಡಿಗಳನ್ನು ದ್ವಂಸಗೊಳಿಸಿದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನೀತಿಯನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿ ಖಂಡಿಸಿದೆ.
ಮಂಗಳೂರು ನಗರದೆಲ್ಲೆಡೆ ಸಣ್ಣಪುಟ್ಟ ಗೂಡಂಗಡಿಗಳಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ಒಂದು ನೋಟೀಸು ಜಾರಿಗೊಳಿಸದೆ ಕನಿಷ್ಟ ಮುನ್ಸೂಚನೆಯೂ ನೀಡದೆ ಏಕಾಏಕಿ ಅಮಾಯಕರ ಸಣ್ಣಪುಟ್ಟ ಅಂಗಡಿಗಳನ್ನು ಕಾರ್ಯಾಚರಣೆಯ ಹೆಸರಲ್ಲಿ ಧ್ವಂಸಗೊಳಿಸಿರುವ ಪಾಲಿಕೆ ಬಿಜೆಪಿ ಆಡಳಿತ ಬಡವರ ವಿರೋಧಿಯಾಗಿ ವರ್ತಿಸಿದೆ. ಬಡವರು ನಡೆಸುವ ವ್ಯಾಪಾರ ವಹಿವಾಟಿನಿಂದ ನಗರದ ರಸ್ತೆಗಳಿಗೆ ಅಡಚಣೆಯುಂಟಾಗುವುದಾದರೆ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ಮಣ್ಣಗುಡ್ಡ ಮುಖ್ಯರಸ್ತೆಯಲ್ಲೇ ನಡೆದ ಫುಡ್ ಫೆಸ್ಟ್ ಆಹಾರ ಮೇಳದಿಂದ ಅಡಚಣೆಯುಂಟಾಗಲಿಲ್ಲವೇ ಎಂದು ಪಾಲಿಕೆ ಆಡಳಿತ ಉತ್ತರಿಸಬೇಕು. ಪಾಲಿಕೆ ವ್ಯಾಪ್ತಿಯ ಸುತ್ತಮುತ್ತ ರಾಜಾರೋಷವಾಗಿ ನಡೆಯುವ ಜೂಜುಕೇಂದ್ರಗಳು, ಇಸ್ಪೀಟ್ ಕ್ಲಬ್ ಗಳನ್ನು ತೆರವುಗೊಳಿಸಲು, ನಗರದ ರಸ್ತೆಗಳನ್ನೇ ಕಬಳಿಸಿ ಅಕ್ರಮವಾಗಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣಗಳ ಮೇಲೆ ಯಾವೊಂದು ಕ್ರಮಕೈಗೊಳ್ಳಲು ಈವರೆಗೂ ಪಾಲಿಕೆ ಆಡಳಿತ ಮುಂದಾಗಿಲ್ಲ. ಅದೇ ಸಣ್ಣಪುಟ್ಟ ವ್ಯಾಪಾರಿಗಳು ರಸ್ತೆಬದಿ ನಡೆಸುವ ವ್ಯಾಪಾರಗಳನ್ನು ತೆರವುಗೊಳಿಸಲು ಪೊಲೀಸರ ಮೂಲಕ ಬಲಪ್ರಯೋಗದಿಂದ ತೆರವುಗೊಳಿಸುತ್ತಿರುವ ಕಾರ್ಯಾಚರಣೆ ಬಡವರ ಬಗೆಗೆ ಬಿಜೆಪಿಗಿರುವ ಕಾಳಜಿಯನ್ನು ಬಯಲುಗೊಳಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಆಡಳಿತ ಈ ಕೂಡಲೇ ಟೈಗರ್ ಕಾರ್ಯಾಚರಣೆಯನ್ನು ನಿಲ್ಲಿಸಬೇಕು. ಅಂಗಡಿ ಧ್ವಂಸಗೊಳಿಸಿ ವಶಪಡಿಸಿಕೊಂಡಿರುವ ಬೀದಿಬದಿ ವ್ಯಾಪಾರಿಗಳ ಸೊತ್ತುಗಳನ್ನು ಕೂಡಲೇ ಹಿಂತಿರುಗಿಸಬೇಕು. ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲು ಕ್ರಮಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಬೀದಿ ವ್ಯಾಪಾರಿಗಳು ನಡೆಸುವ ಹೋರಾಟಗಳ ಜೊತೆ ಸಿಪಿಎಂ ಪಕ್ಷ ನಿಲ್ಲಲಿದೆ ಎಂದು ಪಕ್ಷದ ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು