5:21 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಬೀದಿ ವ್ಯಾಪಾರಿಗಳ ಮೇಲೆ ಪಾಲಿಕೆ ಬಿಜೆಪಿ ಆಡಳಿತ ಕಾರ್ಯಾಚರಣೆ: ಸಿಪಿಎಂ ಖಂಡನೆ

01/08/2024, 18:20

ಮಂಗಳೂರು(reporterkarnataka.com):ನಗರದ ರಸ್ತೆಬದಿಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿ ಜೀವನ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳ ಮೇಲೆ ಟೈಗರ್ ಕಾರ್ಯಾಚರಣೆಯ ಹೆಸರಿನಲ್ಲಿ ಅವರ ಅಂಗಡಿಗಳನ್ನು ದ್ವಂಸಗೊಳಿಸಿದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನೀತಿಯನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿ ಖಂಡಿಸಿದೆ.
ಮಂಗಳೂರು ನಗರದೆಲ್ಲೆಡೆ ಸಣ್ಣಪುಟ್ಟ ಗೂಡಂಗಡಿಗಳಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ಒಂದು ನೋಟೀಸು ಜಾರಿಗೊಳಿಸದೆ ಕನಿಷ್ಟ ಮುನ್ಸೂಚನೆಯೂ ನೀಡದೆ ಏಕಾಏಕಿ ಅಮಾಯಕರ ಸಣ್ಣಪುಟ್ಟ ಅಂಗಡಿಗಳನ್ನು ಕಾರ್ಯಾಚರಣೆಯ ಹೆಸರಲ್ಲಿ ಧ್ವಂಸಗೊಳಿಸಿರುವ ಪಾಲಿಕೆ ಬಿಜೆಪಿ ಆಡಳಿತ ಬಡವರ ವಿರೋಧಿಯಾಗಿ ವರ್ತಿಸಿದೆ. ಬಡವರು ನಡೆಸುವ ವ್ಯಾಪಾರ ವಹಿವಾಟಿನಿಂದ ನಗರದ ರಸ್ತೆಗಳಿಗೆ ಅಡಚಣೆಯುಂಟಾಗುವುದಾದರೆ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ಮಣ್ಣಗುಡ್ಡ ಮುಖ್ಯರಸ್ತೆಯಲ್ಲೇ ನಡೆದ ಫುಡ್ ಫೆಸ್ಟ್ ಆಹಾರ ಮೇಳದಿಂದ ಅಡಚಣೆಯುಂಟಾಗಲಿಲ್ಲವೇ ಎಂದು ಪಾಲಿಕೆ ಆಡಳಿತ ಉತ್ತರಿಸಬೇಕು. ಪಾಲಿಕೆ ವ್ಯಾಪ್ತಿಯ ಸುತ್ತಮುತ್ತ ರಾಜಾರೋಷವಾಗಿ ನಡೆಯುವ ಜೂಜುಕೇಂದ್ರಗಳು, ಇಸ್ಪೀಟ್ ಕ್ಲಬ್ ಗಳನ್ನು ತೆರವುಗೊಳಿಸಲು, ನಗರದ ರಸ್ತೆಗಳನ್ನೇ ಕಬಳಿಸಿ ಅಕ್ರಮವಾಗಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣಗಳ ಮೇಲೆ ಯಾವೊಂದು ಕ್ರಮಕೈಗೊಳ್ಳಲು ಈವರೆಗೂ ಪಾಲಿಕೆ ಆಡಳಿತ ಮುಂದಾಗಿಲ್ಲ. ಅದೇ ಸಣ್ಣಪುಟ್ಟ ವ್ಯಾಪಾರಿಗಳು ರಸ್ತೆಬದಿ ನಡೆಸುವ ವ್ಯಾಪಾರಗಳನ್ನು ತೆರವುಗೊಳಿಸಲು ಪೊಲೀಸರ ಮೂಲಕ ಬಲಪ್ರಯೋಗದಿಂದ ತೆರವುಗೊಳಿಸುತ್ತಿರುವ ಕಾರ್ಯಾಚರಣೆ ಬಡವರ ಬಗೆಗೆ ಬಿಜೆಪಿಗಿರುವ ಕಾಳಜಿಯನ್ನು ಬಯಲುಗೊಳಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಆಡಳಿತ ಈ ಕೂಡಲೇ ಟೈಗರ್ ಕಾರ್ಯಾಚರಣೆಯನ್ನು ನಿಲ್ಲಿಸಬೇಕು. ಅಂಗಡಿ ಧ್ವಂಸಗೊಳಿಸಿ ವಶಪಡಿಸಿಕೊಂಡಿರುವ ಬೀದಿಬದಿ ವ್ಯಾಪಾರಿಗಳ ಸೊತ್ತುಗಳನ್ನು ಕೂಡಲೇ ಹಿಂತಿರುಗಿಸಬೇಕು. ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲು ಕ್ರಮಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಬೀದಿ ವ್ಯಾಪಾರಿಗಳು ನಡೆಸುವ ಹೋರಾಟಗಳ ಜೊತೆ ಸಿಪಿಎಂ ಪಕ್ಷ ನಿಲ್ಲಲಿದೆ ಎಂದು ಪಕ್ಷದ ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು